Webdunia - Bharat's app for daily news and videos

Install App

ವಿಧಾನಸೌಧಕ್ಕೆ ಬೀಗ ಹಾಕಲೆತ್ನಿಸಿದ ಬಿಜೆಪಿ ನಾಯಕರು: ಕೈಕಾಲೆತ್ತಿ ಹೊರಗೆ ಕಳುಹಿಸಿದ ಪೊಲೀಸರು

Krishnaveni K
ಗುರುವಾರ, 26 ಸೆಪ್ಟಂಬರ್ 2024 (14:52 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಇಂದು  ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದರು. ಈ ವೇಳೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೊದಲು ವಿಧಾನಸೌಧದ ಮುಂಭಾಗ ಗಾಂಧಿ ಪ್ರತಿಮೆಯ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಬಿಜೆಪಿ ಶಾಸಕರು, ಸಂಸದರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಇದಾಗಿ ಕೆಲ ಹೊತ್ತಿನ ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ವಿಧಾನಸೌಧಕ್ಕೆ ಬೀಗ ಜಡಿಯಲೂ ಮುಂದಾಗಿದ್ದಾರೆ.

ವಿಧಾನಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ದೊಡ್ಡ ಗಾತ್ರದ ಬೀಗ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿ ಹೊರಗೆ ಕರೆದೊಯ್ದಿದ್ದಾರೆ. ಇಂದು ಬಿಜೆಪಿ ನಾಯಕರು ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ಸಿಎಂ ಸಿದ್ದರಾಮಯ್ಯ ಕೂಡಾ ಒಳಗಿದ್ದರು.

ಇನ್ನು, ಬಿಜೆಪಿ ನಾಯಕರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಮೊದಲೇ ಮಾಹಿತಿಯಿದ್ದಿದ್ದರಿಂದ ಪೊಲೀಸರು ಭಾರೀ ಸಂಖ್ಯೆಯಲ್ಲಿ ಇದ್ದು ಭದ್ರತೆ ಒದಗಿಸಿದ್ದರು. ಪೊಲೀಸರ ಕಣ್ಣು ತಪ್ಪಿಸಿ ಅರವಿಂದ್ ಬೆಲ್ಲದ ಬೀಗ ಹಾಕಲೆತ್ನಿಸಿದರು. ಆಗ ಹೈಡ್ರಾಮಾವೇ ನಡೆಯಿತು. ಕೊನೆಗೆ ಪೊಲೀಸರು ಎಲ್ಲಾ ನಾಯಕರನ್ನು ವಶಕ್ಕೆ ಪಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments