ನೇಹಾ ಹಿರೇಮಠ್ ನಿವಾಸದಲ್ಲಿ ಬಿಜೆಪಿ ನಾಯಕರ ದಂಡು

Krishnaveni K
ಮಂಗಳವಾರ, 30 ಏಪ್ರಿಲ್ 2024 (11:16 IST)
ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿಯ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಅನ್ಯಕೋಮಿನ ಫಯಾಜ್ ಎಂಬ ಯುವಕನಿಂದ ಹತ್ಯೆಗೀಡಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಕುಟುಂಬಸ್ಥರನ್ನು ಬಿಜೆಪಿ ನಾಯಕರು ಇಂದು ಭೇಟಿ ಮಾಡಿದ್ದಾರೆ.

ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೋರೇಟರ್ ಆಗಿದ್ದಾರೆ. ಅವರ ಮನೆಗೆ ಇಂದು ಬಿಜೆಪಿ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಏಪ್ರಿಲ್ 18 ರಂದು 21 ವರ್ಷದ ನೇಹಾಳನ್ನು ಕಾಲೇಜು ಆವರಣದಲ್ಲಿ ಫಯಾಜ್ ಚಾಕುವಿನಿಂದ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ.

ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕಾಂಗ್ರೆಸ್ ನಾಯಕರ ವಿರುದ್ಧವೇ ನಿರಂಜನ್ ಹಿರೇಮಠ್ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಪ್ರಕರಣವನ್ನು ಸಿಒಡಿಗೆ ಒಪ್ಪಿಸಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಕೂಡಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ಇದೀಗ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ, ನಿರಂಜ‌ನ ಹಿರೇಮಠ ಕುಟುಂಬಕ್ಕೆ ಸಮತ್ವನ ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಹಾಜರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ಮುಂದಿನ ಸುದ್ದಿ
Show comments