ಬಿಜೆಪಿ ಶಾಸಕ ಪಿ. ರಾಜೀವ್ ಗೆ ಬಂಧನ ಭೀತಿ !

Webdunia
ಸೋಮವಾರ, 8 ಅಕ್ಟೋಬರ್ 2018 (17:02 IST)
ಕುಡಚಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಗೆ ಬಂಧನ ಭೀತಿ ಎದುರಾಗಿದೆ.

2016 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧ ಎದುರಾದ ಘಟನೆ ಇದಾಗಿದೆ. ಮಾಜಿ ಶಾಸಕ ಶಾಮ ಘಾಟಗೆ ಮನೆಗೆ ಹೋಗಿ ಧಮಕಿ ಹಾಕಿದ ಪ್ರಕರಣ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕನ ವಿರುದ್ಧ ವಾರಂಟ ಜಾರಿಯಾಗಿದೆ.  
ಶಾಸಕರ ಮೇಲೆ ಸಕ್ಕರೆ ಕಾರ್ಖಾನೆಗಳ ವಿರುದ್ಧ ಹಣ ಪಡೆದು ಪ್ರತಿಭಟನೆ ನಿಲ್ಲಿಸಿದ್ದಾರೆ ಎಂದು ಮಾಜಿ ಶಾಸಕ ಆರೋಪ ಮಾಡಿದ್ದಾರೆ.

ಶ್ಯಾಮ ಘಾಟಗೆ ಮನೆಗೆ ಹೋಗಿ ಅಭಿವೃದ್ಧಿ ವಿಷಯದಲ್ಲಿ ಬಹಿರಂಗ ಚರ್ಚೆ ಮಾಡುವಂತೆ ಶಾಸಕ ಪಿ ರಾಜೀವ ಹೇಳಿದ್ದರು.
ಈ ಸಂದರ್ಭದಲ್ಲಿ ವಾಗ್ವಾದ ನಡೆದು ಶಾಸಕ ಪಿ. ರಾಜೀವ ಸೇರಿದಂತೆ ಅವರ ಬೆಂಬಲಿಗರ ಮೇಲೆ ಪ್ರಕರಣವನ್ನು  ಘಾಟಗೆ ಕುಟುಂಬದವರು ದಾಖಲಿಸಿದ್ದರು.

ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದ ಘಾಟಗೆ ಕುಟುಂಬದವರು.  
ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ ಜಾರಿ ಮಾಡಿರುವ ಬೆಂಗಳೂರಿನ ವಿಶೇಷ ನ್ಯಾಯಾಲಯದ ಆದೇಶದಿಂದಾಗಿ ಶಾಸಕನಿಗೆ ಬಂಧನ ಭೀತಿ ಶುರುವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಹಿಂದೂಗಳ ನಂಬಿಕೆಯೊಂದಿಗೆ ಆಟವಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ

ಪುಟ್ಟ ಕಂದಮ್ಮಗಳನ್ನು ಡೇಕೇರ್‌ ಸೆಂಟರ್‌ನಲ್ಲಿ ಬಿಡುವ ಮುನ್ನಾ ಹುಷಾರ್‌, ಬೆಂಗಳೂರಿನಲ್ಲಿದ್ದು ಎನ್ನಲಾದ ಈ ಘಟನೆ ಕರುಳು ಹಿಂಡುತ್ತದೆ

Karnataka Weather: ಜು 2ರಂದು ದ.ಕನ್ನಡ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments