Webdunia - Bharat's app for daily news and videos

Install App

ಮುಜರಾಯಿ ಅನುದಾನ ವಾಪಸ್ ಹಿಂಪಡೆಯಿರಿ ಎಂದ ಬಿಜೆಪಿ ಶಾಸಕ

Webdunia
ಶನಿವಾರ, 17 ನವೆಂಬರ್ 2018 (18:34 IST)
ಮುಜರಾಯಿ ಇಲಾಖೆ ಅನುದಾನ ಹಿಂಪಡೆಯಲು ಬಿಜೆಪಿ ಶಾಸಕ ಮನವಿ ಮಾಡಿಕೊಂಡು ಸಚಿವರಿಗೆ ಪತ್ರ ಬರೆದಿದ್ದಾರೆ.

ಹೊಸದುರ್ಗ ಶಾಸಕ ಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದು, ಬಂದ ಅನುದಾನ ವಾಪಸ್ಸು ಪಡೆಯುವಂತೆ ಪತ್ರ ಬರೆದಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪತ್ರ ಬರೆದಿದ್ದು, ದೇಗುಲ ಅಭಿವೃದ್ಧಿಗೆ‌ 8ಲಕ್ಷ‌ ರೂ‌. ಬಿಡುಗಡೆ ಮಾಡಿರುವ ಮುಜರಾಯಿ ಇಲಾಖೆ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಜರಾಯಿ ಇಲಾಖೆ ಸಚಿವ ರಾಜಶೇಖರ ಬಿ. ಪಾಟೀಲ್ ಅವರಿಗೆ ಪತ್ರ ಬರೆದ ಶಾಸಕ ಶೇಖರ್, ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.

ಕೇವಲ‌ 8 ಲಕ್ಷ ರೂ.‌ ಅನುದಾನವನ್ನು ಮಂಜೂರು ಮಾಡಿದ್ದಕ್ಕೆ ಗೂಳಿಹಟ್ಟಿ ಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ. ಈ‌ ಅನುದಾನ ನಮ್ಮ ತಾಲೂಕಿಗೆ ಬಹಳ‌ ದೊಡ್ಡದಾಯಿತು. ಸಿಎಂ ಅಥವಾ ಮುಜರಾಯಿ ಸಚಿವರ ಕ್ಷೇತ್ರದಲ್ಲಿ ಈ ಅನುದಾನ ಬಳಕೆ ಮಾಡಿಕೊಳ್ಳಿ. ನಾನು‌ ಬಂದು ಹಣ್ಣು ಕಾಯಿ ತಂದು ಪೂಜೆ‌ ಮಾಡಿಸಿ ದೇವರ ಆಶೀರ್ವಾದ ಪಡೆಯುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಹಳೇಕುಂದೂರು ಗ್ರಾಮದ ಆಂಜನೇಯ ಸ್ವಾಮಿ ದೇಗುಲಕ್ಕೆ ಮಂಜೂರಾಗಿದ್ದ ಅನುದಾನವನ್ನು ಹಿಂಪಡೆದುಕೊಳ್ಳುವಂತೆ ಪತ್ರ ಬರೆದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments