Select Your Language

Notifications

webdunia
webdunia
webdunia
webdunia

6 ತಿಂಗಳಷ್ಟೇ ನಿಮ್ಮ ಸರ್ಕಾರ, ನಮ್ಮ ಸರ್ಕಾರ ಬಂದಾಗ ನೋಡಿಕೊಳ್ತೇವೆ: ಪೊಲೀಸರಿಗೆ ಬಿಜೆಪಿ ಶಾಸಕನ ಅವಾಜ್

6 ತಿಂಗಳಷ್ಟೇ ನಿಮ್ಮ ಸರ್ಕಾರ, ನಮ್ಮ ಸರ್ಕಾರ ಬಂದಾಗ ನೋಡಿಕೊಳ್ತೇವೆ: ಪೊಲೀಸರಿಗೆ ಬಿಜೆಪಿ ಶಾಸಕನ ಅವಾಜ್
ಬೆಂಗಳೂರು , ಮಂಗಳವಾರ, 5 ಸೆಪ್ಟಂಬರ್ 2017 (13:15 IST)
ಬಿಜೆಪಿ ನಡೆಸಲು ಉದ್ದೇಶದಿಂದ ಬೈಕ್ ರ್ಯಾಲಿಗೆ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ತಡೆ ಒಡ್ಡಿದ್ದಾರೆ. ಬೆಂಗಳೂರಲ್ಲಿ ಪೊಲೀಸರ ವಿರುದ್ಧ ಮಾಜಿ ಡಿಸಿಎಂ ಆರ್. ಅಶೋಕ್ ಅವಾಜ್ ಹಾಕಿದ ಬಳಿಕ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಅವಾಜ್ ಹಾಕಿದ್ದಾರೆ.

ಬೆಳಗಾವಿ ನಗರದಿಂದ ಮಂಗಳೂರು ಕಡೆ ಹೊರಟಿದ್ದ ಬೈಕ್ ರ್ಯಾಲಿಗೆ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ತಡೆ ಒಡ್ಡಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಬಂದ ಶಾಸಕ ಸಂಜಯ್ ಪಾಟೀಲ್, 6 ತಿಂಗಳು ಮಾತ್ರ ಕಾಂಗ್ರೆಸ್ ಸರ್ಕಾರದ ಕಾಲಾವಧಿ. ಆ ಬಳಿಕ ನಮ್ಮ ಸರ್ಕಾರ ಬರುತ್ತೆ. ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದೀರಾ..? ಎಂದು ಸಂಜಯ್ ಪಾಟೀಲ್ ಹರಿಹಾಯ್ದಿದ್ದಾರೆ.

ಇತ್ತ, ಅನುಮತಿ ಇಲ್ಲದಿದ್ದರೂ ಬಿಜೆಪಿ ಬೈಕ್ ಜಾಥಾಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಬಗ್ಗೆ ಡಿಜಿಪಿ ಆರ್.ಕೆ. ದತ್ತಾ ಜೊತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರ ಮೇಲೆ ಸಂಸದ ಪ್ರತಾಪ ಸಿಂಹನ "ಪ್ರತಾಪ"