Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ದೂರು

Krishnaveni K
ಶನಿವಾರ, 21 ಸೆಪ್ಟಂಬರ್ 2024 (12:03 IST)
ಬೆಂಗಳೂರು: ಅಮೆರಿಕಾ ಪ್ರವಾಸದಲ್ಲಿ ಮೀಸಲಾತಿ ಬಗ್ಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಯೋಗ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನತೆ ಇದೆ ಎಂದಾದರೆ ಮೀಸಲಾತಿ ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಅಮೆರಿಕಾ ಪ್ರವಾಸದಲ್ಲಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಭಾರೀ ಟೀಕೆಗೊಳಗಾಗಿತ್ತು. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ಬಿಜೆಪಿ, ಕಾಂಗ್ರೆಸ್ ಮೀಸಲಾತಿ ವಿರೋಧಿ ಎಂಬುದು ಇದರಲ್ಲೇ ಸ್ಪಷ್ಟವಾಗುತ್ತದೆ ಎಂದಿತ್ತು.

ಇದು ಇಷ್ಟಕ್ಕೇ ನಿಲ್ಲದೇ ರಾಹುಲ್ ವಿರುದ್ಧ ಪ್ರತಿಭಟನೆಯನ್ನೂ ನಡೆಸಿತ್ತು. ರಾಜ್ಯದಲ್ಲೂ ಬಿಜೆಪಿ ಮತ್ತು ಜೆಡಿಎಸ್ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸಿತ್ತು. ಇದೀಗ ವಿಧಾನಪರಿಷತ್ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಸಪರಿಷತ್ ಸದಸ್ಯ ಎನ್. ರವಿಕುಮಾರ್ ನೇತೃತ್ವದ ನಿಯೋಗ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದೆ.

ತಮ್ಮ ಹೇಳಿಕೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೇ ರಾಹುಲ್ ಮತ್ತು ಕಾಂಗ್ರೆಸ್ ನಾಯಕರು ಸ್ಪಷ್ಟನೆಯನ್ನೂ ನೀಡಿದ್ದರು. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಮಾನತೆ ಬಂದಾಗ ಮೀಸಲಾತಿ ರದ್ದು ಮಾಡುವ ಬಗ್ಗೆ ಚಿಂತನೆ ನಡೆಸುವುದಾಗಿ ಹೇಳಿದ್ದೆ. ಆದರೆ ಇದನ್ನು ಬಿಜೆಪಿಯವರು ತಪ್ಪಾಗಿ ಸಂದೇಶ ನೀಡುತ್ತಿದ್ದಾರೆ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments