Webdunia - Bharat's app for daily news and videos

Install App

ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಪ್ರತಾಪ್‌ ಸಿಂಹ, ಸೋಮಶೇಖರ್‌ ವಿರುದ್ಧ ದೂರು!

Webdunia
ಶನಿವಾರ, 18 ಜೂನ್ 2022 (17:04 IST)

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸರಣಿ ಸೋಲಾದ ಹಿನ್ನೆಲೆಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್‌ ಸಿಂಹ ವಿರುದ್ದ ಹೈಕಮಾಂಡ್‌ ಗೆ ದೂರು ನೀಡಲಾಗಿದೆ.
ದಕ್ಷಿಣ ಪದವೀಧರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ಬಿ.ಎಲ್.ಸಂತೋಷ್ ಮೂಲಕ ಹೈಕಮಾಂಡ್‌ ಗೆ ಸೋಲಿಗೆ ಕಾರಣ ಹೇಳಿದ್ದಾರೆ ಎನ್ನಲಾಗಿದೆ.
ಬಿಜೆಪಿ ಭದ್ರಕೋಟೆಯಾಗಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಹಿನ್ನಡೆಯಾಗಲು ಸ್ವಪಕ್ಷೀಯರೇ ಕಾರಣ. ಒಕ್ಕಲಿಗ ಮತಗಳನ್ನ ಸೆಳೆಯುವಲ್ಲಿ ಬಿಜೆಪಿ ವಿಫಲವಾಗಿದೆ. ವಕೀಲರ ಬಗ್ಗೆ ಅವಹೇಳನದ ಮಾತು, ಚುನಾವಣಾ ಹೊಸ್ತಿಲಲ್ಲಿ‌ ಶಾಸಕ ಎಸ್.ಎ.ರಾಮದಾಸ್‌, ಎಲ್.ನಾಗೇಂದ್ರ ವಿರುದ್ದ ಹೇಳಿಕೆ ಸೇರಿದಂತೆ ಹಲವು ಎಡವಟ್ಟುಗಳಿಂದ ಮೈಸೂರು ನಗರದಲ್ಲಿ ಬಿಜೆಪಿ ಪರವಾದ ಅತ್ಯಧಿಕ ಮತಗಳಿದ್ದರೂ ಸೆಳೆಯುವಲ್ಲಿ ವಿಫಲವಾಗಿದೆ ಎಂದು ಮೈ.ವಿ.ರವಿಶಂಕರ್ ತಿಳಿಸಿದ್ದಾರೆ.
ಎಸ್.ಟಿ.ಸೋಮಶೇಖರ್, ಪ್ರತಾಪ್‌ಸಿಂಹ ಕೇವಲ ವೇದಿಕೆ ಕಾರ್ಯಕ್ರಮಗಳಿಗಷ್ಟೇ ಸೀಮಿತವಾಗಿದ್ದರು. ರಘು ಕೌಟಿಲ್ಯಗೆ ನೀಡಿದ ಒಳ ಏಟಿನಂತೆ ನನಗೂ ಒಳ ಏಟು ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಸೋಲಾಗಿದೆ. ಇವರಿಬ್ಬರ ವಿರುದ್ದ ಕ್ರಮ ಜರುಗಿಸಬೇಕು ಎಂದು  ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಮೈ.ವಿ.ರವಿಶಂಕರ್ ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್‌ಸಿಂಹ ವಿರುದ್ದ ಕ್ರಮ ಕೈಗೊಳ್ಳುವ ಕುರಿತಂತೆ ಸಂತೋಷ್ ಚರ್ಚೆ ನಡೆಸಿದ್ದಾರೆ. ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments