Select Your Language

Notifications

webdunia
webdunia
webdunia
webdunia

ಸರ್ಕಾರದ ಸರ್ಕಸ್ ನಡುವೆಯೂ `ಮಂಗಳೂರು ಚಲೋ’ ಯಶಸ್ವಿ

ಸರ್ಕಾರದ ಸರ್ಕಸ್ ನಡುವೆಯೂ `ಮಂಗಳೂರು ಚಲೋ’ ಯಶಸ್ವಿ
ಮಂಗಳೂರು , ಗುರುವಾರ, 7 ಸೆಪ್ಟಂಬರ್ 2017 (14:42 IST)
ಮಂಗಳೂರು: ಬಿಜೆಪಿ ಯುವಮೋರ್ಚ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್ ರ‍್ಯಾಲಿ ಹಾಗೂ ಪಾದಯಾತ್ರೆ ಯಶಸ್ವಿಯಾಗಿದೆ. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ನಿಗದಿಯಂತೆ ಬೈಕ್ ರ‍್ಯಾಲಿ ಹಾಗೂ ಪಾದಯಾತ್ರೆ ನಡೆಯಿತು.

ಯಡಿಯೂರಪ್ಪ ಭಾಷಣ ಮುಗಿಯುತ್ತಿದ್ದಂತೆ ಕಾರ್ಯಕರ್ತರೆಲ್ಲರೂ ಜಿಲ್ಲಾಧಿಕಾರಿ ಕಚೇರಿ ಕಡೆ ಪಾದಯಾತ್ರೆ ಮೂಲಕ ತೆರಳಿದರು. ಇದೇವೇಳೆ ಕೆಲ ಕಾರ್ಯಕರ್ತರು ಬಲವಂತವಾಗಿ ಬೈಕ್ ಗಳ ಮೂಲಕ ರ‍್ಯಾಲಿ ಹೊರಟರು.
webdunia

ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳಿದ ಬಿಜೆಪಿ ಕಾರ್ಯಕರ್ತರು, ಮುತ್ತಿಗೆ ಹಾಕಲು ಯತ್ನಿಸಿದರು. ಮೊದಲೇ ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ ಸಜ್ಜಾಗಿದ್ದರು. ಮುತ್ತಿಗೆ ಹಾಕುತ್ತಿದ್ದಂತೆ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್, ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಅಶೋಕ್, ಸಿ.ಟಿ.ರವಿ, ಪ್ರತಾಪ್ ಸಿಂಹ ಸೇರಿದಂತೆ ಎಲ್ಲಾ ಕಾರ್ಯಕರ್ತರನ್ನ ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

17ರ ಬಾಲೆಯ ಮೇಲೆ ಎಂಟು ಕಾಮುಕರಿಂದ ಗ್ಯಾಂಗ್‌ರೇಪ್