Webdunia - Bharat's app for daily news and videos

Install App

ಅನುಮತಿ ನೀಡದ ಪೊಲೀಸರು: ವಿರೋಧದ ನಡುವೆಯೂ ರ್ಯಾಲಿ ಹೊರಟ ಕಾರ್ಯಕರ್ತರು

Webdunia
ಮಂಗಳವಾರ, 5 ಸೆಪ್ಟಂಬರ್ 2017 (14:18 IST)
ಹುಬ್ಬಳ್ಳಿ: ಬಿಜೆಪಿ ಯುವ ಮೋರ್ಚಾ ಕರೆ ನೀಡಿರುವ ಮಂಗಳೂರು ಚಲೋ ರ್ಯಾಲಿಗೆ ಪೊಲೀಸರು ಅನುಮತಿ ನೀಡಿಲ್ಲ. ಈ ವಿರೋಧದ ನಡುವೆಯೂ ನಗರದ ನೆಹರು ಮೈದಾನದಿಂದ ಪೊಲೀಸರ ಬಿಗಿ ಭದ್ರತೆಯ ನಡುವೆಯೇ ಬೈಕ್ ರ್ಯಾಲಿಗೆ ಚಾಲನೆ ಸಿಕ್ಕಿದೆ.

ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಷಿ ಬೈಕ್ ರ್ಯಾಲಿ ಹೊರಟ ಕಾರ್ಯಕರ್ತರಿಗೆ ಹಸಿರು ನಿಶಾನೆ ತೋರಿಸಿದರು. 200ಕ್ಕೂ ಹೆಚ್ಚು ಬೈಕ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ತೆರಳಿದರು.

ರ್ಯಾಲಿ ಹೊರಟ ಬಿಜೆಪಿ ಕಾರ್ಯಕರ್ತರಿಗೆ ಮಹಿಳೆಯರು ಆರತಿ ಬೆಳಗಿ, ಹಣೆಗೆ ಸಿಂಧೂರವಿಟ್ಟು ಕಾರ್ಯಕರ್ತರಿಗೆ ಶುಭಕೋರಿದರು. ರಾಣಿ ಚೆನ್ನಮ್ಮನಿಗೆ ಮಾಲಾರ್ಪಣೆ ಮಾಡಿ, ಕಾರ್ಯಕರ್ತರು ಅಂಜಟಗೇರಿ ಮಾರ್ಗವಾಗಿ ಮಂಗಳೂರು ಕಡೆ ರ್ಯಾಲಿ ಹೊರಟರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments