ಪ್ರಿಯಾಂಕ್​​​ ಮಣಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್​​

Webdunia
ಗುರುವಾರ, 6 ಏಪ್ರಿಲ್ 2023 (18:42 IST)
ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ಮಣಿಸಿ, ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿಯವರು ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಸಕಲ ಸಿದ್ಧತೆ ನಡೆಸಿರುವ ಕಮಲಪಡೆ. ಪ್ರಿಯಾಂಕ ಖರ್ಗೆ ಅವರಿಗೆ ಪ್ರಬಲ ಪೈಪೋಟಿ ಒಡ್ಡಬಲ್ಲ ಅಭ್ಯರ್ಥಿಯನ್ನ ಕಲಬುರಗಿಯ ಚಿತ್ತಾಪುರದಲ್ಲಿ ಕಣಕ್ಕಿಳಿಸಲಿದ್ದಾರೆ. ಸ್ಥಳೀಯವಾಗಿ ಹೆಸರು ಇರುವ ಮತ್ತು ಸಮುದಾಯ ಪರ ಒಲವಿರುವ ವ್ಯಕ್ತಿಗೆ ಮಣೆ ಹಾಕಿದೆ. ಇಷ್ಟು ದಿನ ಮಣಿಕಂಠ್ ರಾಥೋಡ್​​ಗೆ ಟಿಕೆಟ್ ಎನ್ನುತ್ತಿದ್ದ ಕಮಲ ಪಡೆ, ಅವರ ಮೇಲಿನ ರೌಡಿಸಂ ಕೇಸ್ ಹಿನ್ನೆಲೆ ಆಧರಿಸಿ, ಪಾರ್ಟಿಗೆ ಡ್ಯಾಮೇಜ್ ಆಗಬಹುದೆಂಬ ಆತಂಕ‌ದಿಂದ ಮಣಿಕಂಠ್ ಬದಲು ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್​​ಗೆ ಗಾಳ ಹಾಕಿದೆ. 31 ವರ್ಷದ ಚೌಹಾಣ್ ಪರ ಚುನಾವಣಾ ಸಮಿತಿ ಒಲವು ತೋರಿದ್ದು, ಲಂಬಾಣಿ ಸಮುದಾಯದ ಚೌಹಾಣ್ ಪರ ಜಿಲ್ಲಾ ಕೋರ್ ಕಮಿಟಿ ಮತ್ತು ರಾಜ್ಯ ಕೋರ್ ಕಮಿಟಿಯಿಂದ ಹೆಸರು ರವಾನೆಯಾಗಿದೆ. ಈ ನಿಟ್ಟಿನಲ್ಲಿ ಚಿತ್ತಾಪುರದಲ್ಲಿ ಪ್ರಿಯಾಂಕ ಖರ್ಗೆ ಮಣಿಸಲು ಅರವಿಂದ್ ಚೌಹಾಣ್​​ಗೆ ಟಿಕೆಟ್ ನೀಡಲು ನಿರ್ಧಾರಿಸಲಾಗಿದ್ದು, ಗುಜರಾತ್ ಮಾದರಿಯಲ್ಲಿ ಯುವಕರ ಪಡೆ ಕಟ್ಟಲು ಬಿಜೆಪಿ ಸಿದ್ದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ ಅಮಿತ್ ಶಾ

ಪತ್ನಿ ಕೊಂದು ಆಕೆಯ ಹಣೆಗೆ ಕುಂಕುಮವಿಟ್ಟು ಆತ್ಮಹತ್ಯೆಗೆ ಶರಣಾದ ಪತಿ

ಫೋನ್ ಟ್ಯಾಪಿಂಗ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments