Webdunia - Bharat's app for daily news and videos

Install App

ಪ್ರಿಯಾಂಕ್​​​ ಮಣಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್​​

Webdunia
ಗುರುವಾರ, 6 ಏಪ್ರಿಲ್ 2023 (18:42 IST)
ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ಮಣಿಸಿ, ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿಯವರು ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಸಕಲ ಸಿದ್ಧತೆ ನಡೆಸಿರುವ ಕಮಲಪಡೆ. ಪ್ರಿಯಾಂಕ ಖರ್ಗೆ ಅವರಿಗೆ ಪ್ರಬಲ ಪೈಪೋಟಿ ಒಡ್ಡಬಲ್ಲ ಅಭ್ಯರ್ಥಿಯನ್ನ ಕಲಬುರಗಿಯ ಚಿತ್ತಾಪುರದಲ್ಲಿ ಕಣಕ್ಕಿಳಿಸಲಿದ್ದಾರೆ. ಸ್ಥಳೀಯವಾಗಿ ಹೆಸರು ಇರುವ ಮತ್ತು ಸಮುದಾಯ ಪರ ಒಲವಿರುವ ವ್ಯಕ್ತಿಗೆ ಮಣೆ ಹಾಕಿದೆ. ಇಷ್ಟು ದಿನ ಮಣಿಕಂಠ್ ರಾಥೋಡ್​​ಗೆ ಟಿಕೆಟ್ ಎನ್ನುತ್ತಿದ್ದ ಕಮಲ ಪಡೆ, ಅವರ ಮೇಲಿನ ರೌಡಿಸಂ ಕೇಸ್ ಹಿನ್ನೆಲೆ ಆಧರಿಸಿ, ಪಾರ್ಟಿಗೆ ಡ್ಯಾಮೇಜ್ ಆಗಬಹುದೆಂಬ ಆತಂಕ‌ದಿಂದ ಮಣಿಕಂಠ್ ಬದಲು ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್​​ಗೆ ಗಾಳ ಹಾಕಿದೆ. 31 ವರ್ಷದ ಚೌಹಾಣ್ ಪರ ಚುನಾವಣಾ ಸಮಿತಿ ಒಲವು ತೋರಿದ್ದು, ಲಂಬಾಣಿ ಸಮುದಾಯದ ಚೌಹಾಣ್ ಪರ ಜಿಲ್ಲಾ ಕೋರ್ ಕಮಿಟಿ ಮತ್ತು ರಾಜ್ಯ ಕೋರ್ ಕಮಿಟಿಯಿಂದ ಹೆಸರು ರವಾನೆಯಾಗಿದೆ. ಈ ನಿಟ್ಟಿನಲ್ಲಿ ಚಿತ್ತಾಪುರದಲ್ಲಿ ಪ್ರಿಯಾಂಕ ಖರ್ಗೆ ಮಣಿಸಲು ಅರವಿಂದ್ ಚೌಹಾಣ್​​ಗೆ ಟಿಕೆಟ್ ನೀಡಲು ನಿರ್ಧಾರಿಸಲಾಗಿದ್ದು, ಗುಜರಾತ್ ಮಾದರಿಯಲ್ಲಿ ಯುವಕರ ಪಡೆ ಕಟ್ಟಲು ಬಿಜೆಪಿ ಸಿದ್ದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments