Publish Date: Sun, 08 Apr 2018 (08:34 IST)
Updated Date: Sun, 08 Apr 2018 (08:36 IST)
ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆ ನಿನ್ನೆ ಬೆಂಗಳೂರಿನಲ್ಲಿ ನಡೆದಿದ್ದು, ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
ಆದರೆ ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿರುವುದರಿಂದ ಯಾರಿಗೂ ಅಸಮಾಧಾನವಾಗದಂತೆ ಟಿಕೆಟ್ ಫೈನಲ್ ಮಾಡಲು ಇಂದು ದೆಹಲಿಯಲ್ಲಿ ಬಿಜೆಪಿ ನಾಯಕರು ಸಭೆ ಸೇರಲಿದ್ದಾರೆ.
ಈ ಸಭೆಯಲ್ಲಿ ಟಿಕೆಟ್ ಬಗ್ಗೆ ಅಂತಿಮ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದಕ್ಕಾಗಿ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಹೈಕಮಾಂಡ್ ಜತೆ ಇಂದು ಚರ್ಚೆ ನಡೆಸಲಿದೆ. ರಾಜ್ಯದಲ್ಲಿ ಎರಡು ದಿನ ಪ್ರವಾಸ ಮಾಡಿರುವ ರಾಮ್ ಮಾಧವ್ 130 ಕ್ಷೇತ್ರಗಳ ಗ್ರೌಂಡ್ ರಿಪೋರ್ಟ್ ಅನ್ನು ಅಮಿತ್ ಶಾ ಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದರ ಆಧಾರದಲ್ಲಿ ಟಿಕೆಟ್ ಫೈನಲ್ ಆಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.