Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕನ ಮೇಲೆ ಬಿಜೆಪಿ ಶಾಸಕನ ಪುತ್ರಿಯ ಡೆಡ್ಲಿ ಅಟ್ಯಾಕ್!

ಕಾಂಗ್ರೆಸ್ ನಾಯಕನ ಮೇಲೆ ಬಿಜೆಪಿ ಶಾಸಕನ ಪುತ್ರಿಯ ಡೆಡ್ಲಿ ಅಟ್ಯಾಕ್!
ಬೆಳಗಾವಿ , ಸೋಮವಾರ, 9 ಜನವರಿ 2017 (11:19 IST)
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕನ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಾಹಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
 
ಶಾಸಕ ರಾಜು ಕಾಗೆ ಪುತ್ರಿ ಪ್ರತೀಕ್ಷಾ ಜೊತೆಗೆ 11 ಜನರ ರೌಡಿ ತಂಡ ಏಕಾಏಕಿ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ವಿವೇಕ ಶೆಟ್ಟಿಯನ್ನು ಗ್ರಾಮಸ್ಥರ ಎದುರೆ ರಸ್ತೆಗೆ ಎಳೆತಂದು ಕತ್ತು ಹಿಸುಕಿ ಕೊಲೆ ಮಾಡಲು ಸಹ ಯತ್ನಿಸಿದ್ದ ದೃಶ್ಯಗಳು ಸೆರೆಯಾಗಿವೆ. 
 
ಈ ಘೋರ ಘಟನೆಯಲ್ಲಿ ವಿವೇಕ ಶೆಟ್ಟಿಯ ಎಡಗಾಲಿನ ಮೂಳೆ ಮುರಿದಿದ್ದು, ತೀವ್ರ ಗಾಯಕೊಂಡಿರುವ ವಿವೇಕ ಶೆಟ್ಟಿಯನ್ನು ಮಹಾರಾಷ್ಟ್ರದ ಮೀರಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

16 ಮಹಿಳೆಯರ ಮೇಲೆ ಪೊಲೀಸರಿಂದ ಅತ್ಯಾಚಾರ