Select Your Language

Notifications

webdunia
webdunia
webdunia
webdunia

ಶಾಸಕ ಸುರೇಶ್ ಕುಮಾರ್ ಗೆ ಯಾವ ಖಾಯಿಲೆ, ಖುದ್ದಾಗಿ ಮಾಹಿತಿ ಕೊಟ್ಟ ಶಾಸಕ

SureshKumar

Sampriya

ಬೆಂಗಳೂರು , ಬುಧವಾರ, 4 ಸೆಪ್ಟಂಬರ್ 2024 (17:51 IST)
Photo Courtesy X
ಬೆಂಗಳೂರು: ಕೆಲ ದಿನಗಳ ಹಿಂದೆ ಜ್ವರದಿಂದ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ರೂಪಾಂತರಿ ಚಿಕುನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಅವರು ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.  ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಇನ್ನೂ ಸುರೇಶ್ ಕುಮಾರ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ವಂದತಿ ಹಬ್ಬಿತ್ತು. ಈ ಬಗ್ಗೆ ಶಾಸಕರೇ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದರು.

ನಾನು ಆರೋಗ್ಯವಾಗಿದ್ದೇನೆ. ಚಿಕುನ್ ಗುನ್ಯಾ ನನ್ನನ್ನು ಕೆಲ ದಿನಗಳಿಂದ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಲು ಉತ್ಪಾದಕರಿಗೆ ದರ ಹೆಚ್ಚಿಸದಿದ್ದಲ್ಲಿ ಹೋರಾಟ ಖಚಿತ-ನಿಶ್ಚಿತ-ಖಂಡಿತ