Webdunia - Bharat's app for daily news and videos

Install App

ಐಡಿ ಕಾರ್ಡ್ ಕೇಳಿದ ಸಿಬ್ಬಂದಿಗಳ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ

Webdunia
ಮಂಗಳವಾರ, 23 ಏಪ್ರಿಲ್ 2019 (10:14 IST)
ಹಾವೇರಿ : ಸಾಮಾನ್ಯವಾಗಿ ಚುನಾವಣೆ ವೇಳೆ ಸಿಬ್ಬಂದಿಗಳು ಮತದಾರರಲ್ಲಿ ಐಡಿ ಕಾರ್ಡ್ ಕೇಳುತ್ತಾರೆ ಎಂಬ ವಿಚಾರ ಎಲ್ಲರಿಗೂ ತಿಳಿದೆ ಇದೆ.  ಆದರೆ ಈ ವಿಚಾರ ತಿಳಿದಿದ್ದರೂ ಬಿಜೆಪಿ ಶಾಸಕ ಸಿಎಂ ಉದಾಸಿ ಅವರು ಮಾತ್ರ ಐಡಿ ಕಾರ್ಡ್ ಕೇಳಿದ್ದಕ್ಕೆ ಮತಗಟ್ಟೆ ಅಧಿಕಾರಿಗಳಿಗೆ ಅವಾಜ್‌ ಹಾಕಿ ದರ್ಪ ತೋರಿದ್ದಾರೆ.


ಹೌದು. ಇಂದು ಹಾವೇರಿಯಲ್ಲಿ ಹಾನಗಲ್ ಪಟ್ಟಣ್ಣಕ್ಕೆ ಮತದಾನ ಮಾಡುವುದಕ್ಕೆ ಆಗಮಿಸಿ ಶಾಸಕ ಸಿಎಂ ಉದಾಸಿ ಅವರ ಬಳಿ ಮತಗಟ್ಟೆ ಅಧಿಕಾರಿಗಳು ಕಾನೂನಿನ ಅನ್ವಯ ಐಡಿ ಕಾರ್ಡ್ ಅನ್ನು ಕೇಳಿದ್ದಾರೆ. ಇದರಿಂದ ಕೋಪಗೊಂಡ ಅವರು ಮತಗಟ್ಟೆ ಅಧಿಕಾರಿಗಳಿಗಳ ಮೇಲೆ ಗರಂ ಆಗಿದ್ದಾರೆ.


ಅಷ್ಟೇ ಅಲ್ಲದೇ ಐಡಿ ಕಾರ್ಡ್ ಕೇಳಿದ ಮತಗಟ್ಟೆ ಅಧಿಕಾರಿಗಳ ವಿರುದ್ದ ದೂರು ನೀಡುವ ಸಲುವಾಗಿ ಉದಾಸಿಯವರು ಚುನಾವಣಾ ಆಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಆದರೆ ಅಧಿಕಾರಿಗಳು ಕೂಡ ಕಾನೂನಿನ ಅನ್ವಯ ತಮ್ಮ ಗುರುತಿನ ಚೀಟಿಯನ್ನು ತೋರಿಸ ಬೇಕಾಗಿದೆ ಆಂತ ಹೇಳಿದ್ದಾರೆ. ಒಬ್ಬ ಶಾಸಕನಾಗಿ ಸಿ.ಎಂ ಉದಾಸಿ ಅವರು ನಡೆದುಕೊಂಡ ರೀತಿಗೆ ತೀವ್ರ ಖಂಡನೆ ವ್ಯಕ್ತವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments