Webdunia - Bharat's app for daily news and videos

Install App

ಶೋಕಾಚರಣೆ ದಿನ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ

Webdunia
ಗುರುವಾರ, 24 ಜನವರಿ 2019 (07:22 IST)
ಬೆಳಗಾವಿ : ಸಿದ್ದಗಂಗಾ ಶ್ರೀಗಳು ಶಿವೈಕ್ಯರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚಾರಣೆ ಘೋಷಿದರೂ ಬೆಳಗಾವಿ ಜಿಲ್ಲೆಯ ರಾಯಬಾಗದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರು 63ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.


ಜನ್ಮದಿನದ ನಿಮಿತ್ತ ಶಾಸಕರು ಹಾಗೂ ಧರ್ಮ ಪತ್ನಿ ಅವರನ್ನು ರಾಯಬಾಗ ಪಟ್ಟಣದಲ್ಲಿ ಮೆರವಣಿಗೆ ಮಾಡಿ, ಬಳಿಕ ವೇದಿಕೆಗೆ ಕರೆತರಲಾಗಿತ್ತು. ಈ ಕಾರ್ಯಕ್ರಮಕ್ಕೆ  ಅನೇಕರಿಗೆ ಆಮಂತ್ರಣ ನೀಡಿದ್ದರಿಂದ ಸಾವಿರಾರು ಜನರು ಶಾಸಕರ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಸಂಜೆಯೂ ಗಾಯನ ಸ್ಪರ್ಧೆ ಹೆಸರಿನಲ್ಲಿ ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಸಾರೋಟದಲ್ಲಿ ಶಿವಕುಮಾರ ಶ್ರೀಗಳ ಭಾವ ಚಿತ್ರ ಇಟ್ಟು ಪೂಜೆ ಮಾಡಲಾಗಿತ್ತು. ಆದರೆ ಇದೆಲ್ಲಾ ಹೆಸರಿಗೆ ಮಾತ್ರವೆಂದು ಹಾಗೂ  ಶೋಕಾಚರಣೆ ಮತ್ತು ಭೀಕರ ಬರಗಾಲದ ನಡುವೆಯೂ ಶಾಸಕರು ಜನ್ಮದಿನಕ್ಕೆ ಲಕ್ಷಾಂತರ ಹಣ ಖರ್ಚು ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಶೋಕಾಚರಣೆ ದಿನ ಕಾಂಗ್ರೆಸ್ ನ ಸಚಿವ ಪ್ರಿಯಾಂಕ ಖರ್ಗೆ ಸರ್ಕಾರಿ ಕಾರ್ಯಕ್ರಮ ಆಯೋಜನೆ ಮಾಡಿದ್ದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಆದರೆ ಇದೀಗ ಶಾಸಕ ದುರ್ಯೋಧನ ಐಹೊಳೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಬಿಜೆಪಿಗೆ ಸಾಕಷ್ಟು ಮುಜುಗುರಕ್ಕೀಡುಮಾಡಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: ರಾಜ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜಧಾನಿಯಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ: ಗಣತಿದಾರರಿಗೆ ಎರಡು ವಾರಗಳ ಗಡುವು

ಜಿಎಸ್‌ಟಿ ಸರಳೀಕರಣದಿಂದ ರಾಜ್ಯದ ಬೊಕ್ಕಸಕ್ಕೆ ₹ 15,000 ಕೋಟಿ ನಷ್ಟ: ಸಿದ್ದರಾಮಯ್ಯ

ಅ.9ರಂದು ತೆರೆಯಲಿದೆ ಹಾಸನಾಂಬ ದೇಗುಲ: ದೇವಿ ದರ್ಶನಕ್ಕೆ ಗೋಲ್ಡ್ ಪಾಸ್ ವ್ಯವಸ್ಥೆ ಜಾರಿ

ಮೆಟ್ರೊ ನಿಲ್ದಾಣಗಳಿಗೆ ಮೇರು ಸಾಹಿತಿಗಳ ಹೆಸರು: ಪ್ರಸ್ತಾವದಲ್ಲಿ ಯಾರ ಹೆಸರಿದೆ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments