Select Your Language

Notifications

webdunia
webdunia
webdunia
webdunia

ಅಧಿವೇಶನಕ್ಕೆ ಗೈರುಹಾಜರಾದ ಶಾಸಕರ ವಿರುದ್ಧ ಕ್ರಮ: ಬಿಜೆಪಿ

ಅಧಿವೇಶನಕ್ಕೆ ಗೈರುಹಾಜರಾದ ಶಾಸಕರ ವಿರುದ್ಧ ಕ್ರಮ: ಬಿಜೆಪಿ
ಬೆಂಗಳೂರು , ಮಂಗಳವಾರ, 6 ಜೂನ್ 2017 (15:22 IST)
ಅಧಿವೇಶನಕ್ಕೆ ಗೈರುಹಾಜರಾಗುವ ಬಿಜೆಪಿ ಶಾಸಕರ ಮಾಹಿತಿಯನ್ನು ರಾಜ್ಯ ಬಿಜೆಪಿ ಕಚೇರಿಗೆ ನೀಡುವಂತೆ ಸೂಚಿಸಲಾಗಿದೆ.
 
ತುರ್ತುಕೆಲಸ ಬಿಟ್ಟು ಅನಗತ್ಯವಾಗಿ ಗೈರುಹಾಜರಾಗುವ ಶಾಸಕರ ಹೆಸರುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕಾಂಗ ಸಭೆಯ ನಾಯಕರಿಗೆ ನೀಡುವಂತೆ ಹೈಕಮಾಂಡ್ ಆದೇಶ ನೀಡಿದೆ.
 
ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾಸಕರು ಜನಪರ ಸಮಸ್ಯೆಗಳನ್ನು ಸದನದಲ್ಲಿ ಎತ್ತಬೇಕಾಗಿದೆ. ಇಂತಹ ಸಂದರ್ಭದಲ್ಲಿ ಸದನಕ್ಕೆ ಗೈರುಹಾಜರಾಗುವುದು ಸಹಿಸುವಂತಹದಲ್ಲ ಎಂದು ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ ಎನ್ನಲಾಗಿದೆ.
 
ಮುಂಬರುವ ದಿನಗಳಲ್ಲಿ ಅಧಿವೇಶನಕ್ಕೆ ಗೈರುಹಾಜರಾಗುವ ಶಾಸಕರ ವರ್ತನೆಯ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದುಬೈ ಪೊಲೀಸ್ ಪಡೆ ಸೇರಲಿದ್ದಾರೆ ರೋಬೊಟ್ ಪೊಲೀಸರು..!