ಸರಕಾರ ಬೀಳಲಿ ಅಂತ ನಾವು ಅದುಕೊಂಡಿದ್ದೇವೆ ಎಂದ ಬಿಜೆಪಿ ಶಾಸಕ!

Webdunia
ಮಂಗಳವಾರ, 15 ಜನವರಿ 2019 (17:35 IST)
ಹೊಟ್ಟೆಯೊಳಗೆ ವಿಷ ಇಟ್ಕೊಂಡು ಅಧಿಕಾರ ಮಾಡಿದರೆ ಹೀಗೆ ಆಗುತ್ತದೆ. ಸರಕಾರ ಉರುಳಿಸುವ ಕೆಲಸ ನಮ್ಮದ್ದಲ್ಲ. ಆದರೆ ನಾವು ಸರಕಾರ ಬೀಳಲಿ ಎಂದೇ ಅಂದುಕೊಂಡಿದ್ದೇವೆ. ಹೀಗಂತ ಬಿಜೆಪಿ ಶಾಸಕ ಹೇಳಿದ್ದಾರೆ.

ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜನರು ಬಯಸಿದ್ದಲ್ಲ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಇಂತಹ ನೀಚ ಮುಖ್ಯಮಂತ್ರಿಯನ್ನು ನಾನೆಂದೂ ನೋಡಿರಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಹೇಳಿದ್ದರು ಎಂದರು. ನಾನು ಎಂದಿಗೂ ಸಿದ್ದರಾಮಯ್ಯ ಬಗ್ಗೆ ನೀಚ ಪದ ಬಳಕೆ ಮಾಡಿಲ್ಲ. ಹೊಟ್ಟೆಯೊಳಗೆ ವಿಷ ಇಟ್ಕೊಂಡು ಅಧಿಕಾರ ಮಾಡಿದ್ರೆ ಹೀಗೆ ಅಗುತ್ತದೆ. ಸರಕಾರ ಉರುಳಿಸುವ ಕೆಲಸ ನಮ್ಮದ್ದಲ್ಲ. ಆದರೆ ನಾವು ಸರ್ಕಾರ ಬೀಳಲಿ ಎಂದೇ ಅಂದುಕೊಂಡಿದ್ದೇವೆ ಎಂದು ಟಾಂಗ್ ನೀಡಿದರು.

ಅವರ ಶಾಸಕರು ಹೊರಗೆ ಹೋದರೆ ನಮ್ಮನ್ನು ಯಾಕೆ ದೂರುವುದು? ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಗುರುಗಾಮಕ್ಕೆ ಹೋದರೆ ಇವರಿಗೆ ಯಾಕೆ ಭಯ ಎಂದು ಕೇಳಿದರು.

ಅವರಲ್ಲಿ ಇರುವ ಬಂಡಾಯ ಹೆಚ್ಚಾದರೆ ಅದನ್ನ ಶಮನ ಪಡಿಸುವುದು ನಮ್ಮ ಕೆಲಸವಲ್ಲ. ನಾವೇನೂ ಕಾಂಗ್ರೆಸ್ ಹೈಕಮಾಂಡ್ ಅಲ್ಲ. ಸರ್ಕಾರ ಬೀಳಬೇಕು ಎಂಬುದು ಜನರ ಬಯಕೆಯಾಗಿದೆ. ನಮ್ಮದು ಕೂಡ ಸರ್ಕಾರ ಬೀಳಲಿ ಎಂಬ ಬಯಕೆಯಿದೆ ಎಂದು ಹೇಳಿದರು.


ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments