Webdunia - Bharat's app for daily news and videos

Install App

ಸರಕಾರ ಬೀಳಲಿ ಅಂತ ನಾವು ಅದುಕೊಂಡಿದ್ದೇವೆ ಎಂದ ಬಿಜೆಪಿ ಶಾಸಕ!

Webdunia
ಮಂಗಳವಾರ, 15 ಜನವರಿ 2019 (17:35 IST)
ಹೊಟ್ಟೆಯೊಳಗೆ ವಿಷ ಇಟ್ಕೊಂಡು ಅಧಿಕಾರ ಮಾಡಿದರೆ ಹೀಗೆ ಆಗುತ್ತದೆ. ಸರಕಾರ ಉರುಳಿಸುವ ಕೆಲಸ ನಮ್ಮದ್ದಲ್ಲ. ಆದರೆ ನಾವು ಸರಕಾರ ಬೀಳಲಿ ಎಂದೇ ಅಂದುಕೊಂಡಿದ್ದೇವೆ. ಹೀಗಂತ ಬಿಜೆಪಿ ಶಾಸಕ ಹೇಳಿದ್ದಾರೆ.

ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜನರು ಬಯಸಿದ್ದಲ್ಲ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಇಂತಹ ನೀಚ ಮುಖ್ಯಮಂತ್ರಿಯನ್ನು ನಾನೆಂದೂ ನೋಡಿರಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಹೇಳಿದ್ದರು ಎಂದರು. ನಾನು ಎಂದಿಗೂ ಸಿದ್ದರಾಮಯ್ಯ ಬಗ್ಗೆ ನೀಚ ಪದ ಬಳಕೆ ಮಾಡಿಲ್ಲ. ಹೊಟ್ಟೆಯೊಳಗೆ ವಿಷ ಇಟ್ಕೊಂಡು ಅಧಿಕಾರ ಮಾಡಿದ್ರೆ ಹೀಗೆ ಅಗುತ್ತದೆ. ಸರಕಾರ ಉರುಳಿಸುವ ಕೆಲಸ ನಮ್ಮದ್ದಲ್ಲ. ಆದರೆ ನಾವು ಸರ್ಕಾರ ಬೀಳಲಿ ಎಂದೇ ಅಂದುಕೊಂಡಿದ್ದೇವೆ ಎಂದು ಟಾಂಗ್ ನೀಡಿದರು.

ಅವರ ಶಾಸಕರು ಹೊರಗೆ ಹೋದರೆ ನಮ್ಮನ್ನು ಯಾಕೆ ದೂರುವುದು? ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಗುರುಗಾಮಕ್ಕೆ ಹೋದರೆ ಇವರಿಗೆ ಯಾಕೆ ಭಯ ಎಂದು ಕೇಳಿದರು.

ಅವರಲ್ಲಿ ಇರುವ ಬಂಡಾಯ ಹೆಚ್ಚಾದರೆ ಅದನ್ನ ಶಮನ ಪಡಿಸುವುದು ನಮ್ಮ ಕೆಲಸವಲ್ಲ. ನಾವೇನೂ ಕಾಂಗ್ರೆಸ್ ಹೈಕಮಾಂಡ್ ಅಲ್ಲ. ಸರ್ಕಾರ ಬೀಳಬೇಕು ಎಂಬುದು ಜನರ ಬಯಕೆಯಾಗಿದೆ. ನಮ್ಮದು ಕೂಡ ಸರ್ಕಾರ ಬೀಳಲಿ ಎಂಬ ಬಯಕೆಯಿದೆ ಎಂದು ಹೇಳಿದರು.


ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments