Select Your Language

Notifications

webdunia
webdunia
webdunia
webdunia

ಸಂಸದ ನಳಿನ್ ಕಟೀಲ್‌ಗೆ ಕನಿಷ್ಠ ಜ್ಞಾನವೂ ಇಲ್ಲ: ಪೂಜಾರಿ ವಾಗ್ದಾಳಿ

ಸಂಸದ ನಳಿನ್ ಕಟೀಲ್‌ಗೆ ಕನಿಷ್ಠ ಜ್ಞಾನವೂ ಇಲ್ಲ: ಪೂಜಾರಿ ವಾಗ್ದಾಳಿ
ಮಂಗಳೂರು , ಗುರುವಾರ, 5 ಜನವರಿ 2017 (14:18 IST)
ದಕ್ಷಿಣ ಕನ್ನಡ ಜಿಲ್ಲೆಯೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕುಡಿದ ಅಮಲಿನಲ್ಲಿ ಹೇಳಿಕೆ ನೀಡಿದ್ದಾರೆ. ಅವರಿಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ನಳಿನ್ ಕುಮಾರ್ ಕಟೀಲ್, ಕರಾವಳಿಯ ಪ್ರತಿ ಮನೆಗಳಿಗೆ ತೆರಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. 
 
ಮಹದೇವಪ್ರಸಾದ್ ಕುಟಂಬಕ್ಕೆ ಟಿಕೆಟ್....
 
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ದಿವಂಗತ ಮಹದೇವಪ್ರಸಾದ್ ಕುಟಂಬ ಸದಸ್ಯರಿಗೆ ಟಿಕೆಟ್ ನೀಡಲೇ ಬೇಕು. ಇಲ್ಲದಿದ್ದರೆ ಮುಂದೆ ದೊಡ್ಡ ಅನಾಹುತ ಎದುರಿಸಬೇಕಾದಿತು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ನೀಡಿದರೆ ಕಾಂಗ್ರೆಸ್‌ಗೆ ಪ್ಲಸ್ ಪಾಯಿಂಟ್. ಇಲ್ಲದಿದ್ದರೆ ಮೈನಸ್ ಪಾಯಿಂಟ್ ಆಗಲಿದೆ ಭವಿಷ್ಯ ನುಡಿದಿದ್ದಾರೆ
 
ಕಾಂಗ್ರೆಸ್ ಮುಕ್ತ ದೇಶ ನಿರ್ಮಾಣಕ್ಕೆ ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕುತಂತ್ರ ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಧ್ಯ ಇದೆಯಾ? ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಖಾರವಾಗಿ ಪ್ರಶ್ನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನೊಬೆಲ್ ಪ್ರಶಸ್ತಿ ಪಡೆದಲ್ಲಿ 100 ಕೋಟಿ ರೂ. ಬಹುಮಾನ: ಸಿಎಂ ಚಂದ್ರಬಾಬು ನಾಯ್ಡು ಘೋಷಣೆ