Select Your Language

Notifications

webdunia
webdunia
webdunia
webdunia

ಬಿಜೆಪಿ ಸಂಸದರಿಗೆ ನಾಚಿಕೆಯಾಗ್ಬೇಕು: ಕುಮಾರಸ್ವಾಮಿ ಕಿಡಿ

ಬಿಜೆಪಿ ಸಂಸದರಿಗೆ ನಾಚಿಕೆಯಾಗ್ಬೇಕು: ಕುಮಾರಸ್ವಾಮಿ ಕಿಡಿ
ಬೆಂಗಳೂರು , ಭಾನುವಾರ, 2 ಏಪ್ರಿಲ್ 2017 (13:53 IST)
ತಮಿಳುನಾಡಿನ ರೈತರು ಕಾವೇರಿ ನೀರಿಗಾಗಿ ತೀವ್ರ ಹೋರಾಟ ಆರಂಭಿಸಿದ್ದರೂ ಅದರತ್ತ ಗಮನಹರಿಸದ ಬಿಜೆಪಿ ಸಂಸದರು ಉಪಚುನಾವಣೆಯಲ್ಲಿ ನಿರತರಾಗಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಮಿಳುನಾಡಿನ ರೈತರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಾಲ ಮನ್ನಾಗೆ ಒತ್ತಾಯಿಸಿ ಬುರುಡೆ ಇಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರಕಾರವಿದ್ದರೂ ರಾಜ್ಯದ ರೈತರ ಸಾಲ ಮನ್ನಾಗೆ ಬಿಜೆಪಿ ನಾಯಕರು ಒತ್ತಾಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ನಿರತವಾಗಿವೆ. ಎರಡೂ ಪಕ್ಷಗಳಿಗೆ ರಾಜ್ಯದ ಜನರ ಬಗ್ಗೆ ಕಾಳಜಿಯಿಲ್ಲ. ಕೇವಲ ರಾಜಕಾರಣ ಮಾಡುವುದು, ಲೂಟಿ ಹೊಡೆಯುವುದು ಪಕ್ಷಗಳ ಮುಖ್ಯ ಕಾಯಕವಾಗಿದೆ ಎಂದರು.
 
ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಮೇವಿನ ಕೊರತೆ ಎದುರಾಗಿದೆ. ಕಾವೇರಿ, ಮಹಾದಾಯಿ, ಎತ್ತಿನ ಹೊಳೆ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ರಾಜ್ಯದಲ್ಲಿರುವ ಸಮಸ್ಯೆಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತು ಬಿಜೆಪಿ ನೇರ ಹೊಣೆಯಾಗಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆ ನಂತ್ರ ಪರಮೇಶ್ವರ್‌ಗೆ ಗೇಟ್ ಪಾಸ್: ಆರ್.ಅಶೋಕ್ ಬಾಂಬ್