Select Your Language

Notifications

webdunia
webdunia
webdunia
webdunia

ಬಿಜೆಪಿ ಸಂಸದರು ಪ್ರಧಾನಿ ಮೋದಿ ಮೇಲೆ ಒತ್ತಡ ತರಲಿ: ಕೋಡಿಹಳ್ಳಿ

ಸುಪ್ರೀಂಕೋರ್ಟ್
ಮೈಸೂರು , ಮಂಗಳವಾರ, 20 ಸೆಪ್ಟಂಬರ್ 2016 (17:12 IST)
ಕಾವೇರಿ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಇಂದು ನೀಡಿದ ತೀರ್ಪು ಕರ್ನಾಟಕ ಸರಕಾರಕ್ಕೆ ಮಾರಕವಾಗಿದೆ ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಆಘಾತ ವ್ಯಕ್ತಪಡಿಸಿ ಬಿಜೆಪಿ ಸಂಸದರು ಪ್ರಧಾನಿ ಮೋದಿ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದ್ದಾರೆ.
 
ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗದಂತೆ ಬಿಜೆಪಿ ಸಂಸದರು ಪ್ರಧಾನಿ ಮೋದಿ ಮೇಲೆ ಒತ್ತಡ ಹೇರಬೇಕು. ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ಗೆ ಬಗ್ಗದೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ತಮಿಳುನಾಡಿಗೆ ನೀರು ಬಿಡದೆ ನ್ಯಾಯಾಂಗ ನಿಂದನೆಯಯಾದರೂ ಪರವಾಗಿಲ್ಲ. ತಾಕತ್ ಪ್ರದರ್ಶಿಸಬೇಕು. ಸಂಪೂರ್ಣ ಕರ್ನಾಟಕ ರಾಜ್ಯ ನಿಮ್ಮ ಜೊತೆಗಿರುತ್ತದೆ ಎಂದು ಹೇಳಿದ್ದಾರೆ.
 
ನ್ಯಾಯಾಂಗ ನಿಂದನೆ ಮಾಡಿ ನೀವು ಜೈಲಿಗೆ ಹೋದಲ್ಲಿ ನಾವು ನಿಮ್ಮೊಂದಿಗೆ ಜೈಲಿಗೆ ಬರಲು ಸಿದ್ದರಿದ್ದೇವೆ. ಆದರೆ, ತಮಿಳುನಾಡಿಗೆ ನೀರು ಬಿಟ್ಟಲ್ಲಿ ರಾಜ್ಯದ ರೈತರು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸುಪ್ರೀಂ ತೀರ್ಪಿಗೆ ಆಕ್ರೋಶ: ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭುಗಿಲೆದ್ದ ಪ್ರತಿಭಟನೆ