Webdunia - Bharat's app for daily news and videos

Install App

ಎಂಪಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದ ಬಿಜೆಪಿ ಸಂಸದೆ ಶೋಭಾ ಕರದ್ಲಾಂಜೆ

Webdunia
ಶುಕ್ರವಾರ, 27 ಜುಲೈ 2018 (14:23 IST)
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದೆ ಶೋಭಾ ಕರದ್ಲಾಂಜೆ ಮೈಸೂರಿನಲ್ಲಿ ನಗುತ್ತಲ್ಲೇ ಮಾರ್ಮಿಕವಾಗಿ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಆಶಾಢ ಮಾಸದ ಎರಡನೇ ಶುಕ್ರವಾರವಾಗಿದ್ದು, ಸಂಸದೆ ಶೋಭಾ ಕರದ್ಲಾಂಜೆ ಚಾಮುಂಡಿ ಬೆಟ್ಟಕ್ಕೆ ತಾಯಿಯ ದರ್ಶನ ಪಡೆಯಲು ಮೆಟ್ಟಿಲುಗಳ ಮೂಲಕ ಹತ್ತುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಬಗ್ಗೆ ಸರ್ವೆ ನಡೆಯುತ್ತಿದೆ. ಬಿ.ಎಸ್ ಯಡಿಯೂರಪ್ಪನವರು ಎಲ್ಲರ ಬಗ್ಗೆ ಚಿಂತನೆಯನ್ನ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನ ನೋಡಿಕೊಂಡು ರಾಜ್ಯದ ಬಿಜೆಪಿ ನಿರ್ಧಾರವನ್ನ ತೆಗೆದುಕೊಳ್ಳುತ್ತದೆ. ನೀವು ಸ್ಪರ್ಧೆ  ಮಾಡುತ್ತೀರಾ ಎಂಬ ಮಾಧ್ಯಮಗಳ ಮರು ಪ್ರಶ್ನೆಗೆ, ನಾನು ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ  ಮಾಡುವುದಿಲ್ಲವೆಂದು ಹೇಳಿದ್ದೇನೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಇನ್ನೂ ಕೋಡಿ ಮಠದ ಸ್ವಾಮೀಜಿಗಳ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಲೋಲ್ಲ ಕಲೋಲ್ಲವಾಗುತ್ತದೆ ಎಂಬ ಭವಿಷ್ಯದ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ ಕರದ್ಲಾಂಜೆ, ಸ್ವಾಮೀಜಿಗಳ ಭವಿಷ್ಯದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಇದೆಲ್ಲದಕ್ಕೂ ಜನ ಬೆಂಬಲ ಮತ್ತು ದೇವರ ಬೆಂಬಲ ಬೇಕು. ನಮಗೆ ಭವಿಷ್ಯದ ಬಗ್ಗೆ ಗೊತ್ತಿಲ್ಲ.

ಭಾರತೀಯ ಜನತಾ ಪಾರ್ಟಿಗೆ ಜನ ಬೆಂಬಲ ಮತ್ತು ದೇವರ ಆಶೀರ್ವಾದವಿದೆ. ರಾಜ್ಯ ಸರ್ಕಾರ ಇನ್ನೂ ಟೇಕ್ ಆಫ್ ಆಗಿಲ್ಲ. ರಾಜ್ಯ ಸರ್ಕಾರಕ್ಕೆ ಸಾಕಷ್ಟು ಅವಕಾಶಗಳನ್ನ ಕೊಟ್ಟಿದ್ದೇವೆ, ಇನ್ನೂ ಟೇಕ್ ಆಫ್ ಆಗಬೇಕು. ಒಳ್ಳೆಯ ಕೆಲಸಗಳನ್ನ ಮಾಡಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿದ್ದಾರೆ. ಒಟ್ಟಾಗಿ ರಾಜ್ಯದ ಕೆಲಸ ಮಾಡುವಂತೆ ಅವಕಾಶಗಳನ್ನ ಕೊಡುತ್ತಿದ್ದೇವೆ ಎಂದು ರಾಜ್ಯ ಸರ್ಕಾರ ವಿರುದ್ದ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments