Select Your Language

Notifications

webdunia
webdunia
webdunia
webdunia

ಕೆರೆಗಳ ರಕ್ಷಣೆಗೆ ಧಾವಿಸುವಂತೆ ರಾಜ್ಯಪಾಲರಿಗೆ ಸಂಸದೆ ಶೋಭಾ ಮನವಿ

ಶೋಭಾ ಕರಂದ್ಲಾಜೆ
ಬೆಂಗಳೂರು , ಬುಧವಾರ, 26 ಜುಲೈ 2017 (16:22 IST)
ರಾಜ್ಯ ಸರಕಾರ 1500 ಕೆರೆಗಳ ಡಿನೋಟಿಫಿಕೇಶನ್‌ಗೆ ಚಿಂತನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೆರೆಗಳ ರಕ್ಷಣೆಗೆ ಧಾವಿಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ. 
 
ರಾಜ್ಯ ಸರಕಾರ 1500 ನಿರ್ಜೀವ ಕೆರೆಗಳ ಡಿನೋಟಿಫಿಕೇಶನ್ ಮಾಡುವ ಪ್ರಸ್ತಾವನೆ ಸರಕಾರದ ಮುಂದಿರುವುದರಿಂದ ಕೂಡಲೇ ರಾಜ್ಯಪಾಲ ವಜುಭಾಯಿ ವಾಲಾ ಮಧ್ಯಪ್ರವೇಶಿಸಬೇಕು ಎಂದು ಕೋರಿದ್ದಾರೆ. 
 
ಹರಳೂರು ಕೆರೆ ಮತ್ತು ಸಾರಕ್ಕಿ ಕೆರೆಗಳ ಮಹತ್ವದ ಬಗ್ಗೆ ಸಂಪೂರ್ಣ ವಿವರಣೆಯನ್ನು ರಾಜ್ಯಪಾಲರಿಗೆ ರವಾನಿಸಿದ ಪತ್ರದಲ್ಲಿ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರಕಾರ ರಿಯಲ್ ಎಸ್ಟೇಟ್‌ಗೆ ಆಸ್ಪದ ನೀಡುತ್ತಿದೆ ಎಂದು ಆರೋಪಿಸಿದರು.
 
ರಾಜ್ಯ ಸರಕಾರ ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ಕೆರೆಗಳ ಡಿನೋಟಿಫಿಕೇಶನ್ ಮಾಡುತ್ತಿದೆ. ಕೆರೆಗಳ ಡಿನೋಟಿಪಿಕೇಶನ್ ಮಾಡದಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರೈಗೆ ಗೃಹಸಚಿವ ಸ್ಥಾನ ನೀಡಿದ್ರೆ ರಾಜ್ಯ ಹೊತ್ತಿ ಉರಿಯುತ್ತದೆ: ಆರ್. ಅಶೋಕ್