Publish Date: Mon, 28 Sep 2020 (20:34 IST)
Updated Date: Mon, 28 Sep 2020 (20:38 IST)
ಕೊರೊನಾ ವಿರುದ್ಧ ಹೋರಾಡಿ ಜಯ ಸಾಧಿಸಿದ್ದ ಬಿಜೆಪಿ ಸಂಸದರೊಬ್ಬರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಿಜೆಪಿ ಸಂಸದ ದಾಖಲಾಗಿದ್ದಾರೆ.
ಕಲಬುರಗಿ ಸಂಸದ ಡಾ. ಉಮೇಶ ಜಾಧವ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಯ ತೆರಳಿದ್ದಾರೆ.
ಡಾ. ಮಂಜುನಾಥ್ ಸಿ. ಎನ್. ಮುಖ್ಯಸ್ಥರು ಜಯದೆವ ಆಸ್ಪತ್ರೆ ಅವರ ನಿರ್ದೆಶನದ ಹಿನ್ನಲೆಯಲ್ಲಿ ತಪಾಸಣೆಗೆ ಒಳಗಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿ ಕೊಂಡಿದ್ದಾರೆ.
ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕ ಪಡುವ ಅಗತ್ಯತೆವಿಲ್ಲವೆಂದು ಕಾರ್ಯಕರ್ತರಲ್ಲಿ ಸಂಸದರು ಮನವಿ ಮಾಡಿದ್ದಾರೆ.