Select Your Language

Notifications

webdunia
webdunia
webdunia
webdunia

ಚುನಾವಣೆಗೆ ಬಿಜೆಪಿ ಸಜ್ಜು

ಚುನಾವಣೆಗೆ ಬಿಜೆಪಿ ಸಜ್ಜು
ಚಿತ್ರದುರ್ಗ , ಶನಿವಾರ, 18 ಜೂನ್ 2022 (13:46 IST)
ಚಿತ್ರದುರ್ಗ : ಕೋಟೆನಾಡು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶ ನಡೆಯಲಿದ್ದು, ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ಈ ಸಮಾವೇಶ ನಡೆಯಲಿದ್ದು, ಜೆ.ಪಿ. ನಡ್ಡಾ ಅವರು ಮಧ್ಯಾಹ್ನ ಸುಮಾರು 3:45ಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಎಸ್.ಜೆ.ಎಮ್ ಆಂಗ್ಲ ಮಾಧ್ಯಮ ಶಾಲೆ ಆವರಣದ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 4 ಗಂಟೆಗೆ ಮುರುಘಾಮಠಕ್ಕೆ ಭೇಟಿ ನೀಡಿ, ಡಾ.ಶಿವಮೂರ್ತಿ ಮುರುಘಾ ಶರಣರ ದರ್ಶನ ಪಡೆಯಲಿದ್ದಾರೆ.

ಕೋಟೆನಾಡಿನಿಂದ 2023ರ ಚುನಾವಣೆಗೆ ಬಿಜೆಪಿ ರಣಕಹಳೆ ಊದಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದು, ಸದ್ಯ ಜಿಲ್ಲೆಯ 6 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಷ್ಟೇ ಅಲ್ಲದೇ ಚಿತ್ರದುರ್ಗ ಲೋಕಸಭೆ ಕ್ಷೇತ್ರವನ್ನೂ ಬಿಜೆಪಿ ಗೆದ್ದಿದೆ. ಈ ಹಿನ್ನೆಲೆಯಲ್ಲಿ ಕೇಸರಿಪಡೆಯ ಭದ್ರಕೋಟೆಯಾದ ಕೋಟೆನಾಡಿನಿಂದ ಮತ್ತೊಮ್ಮೆ ಕಹಳೆ ಊದಲು ಸಜ್ಜಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲ್ಲ: ಬಿಸಿ ನಾಗೇಶ್