Webdunia - Bharat's app for daily news and videos

Install App

ಆಪರೇಷನ್ ಕಮಲಕ್ಕೆ ಬಿಜೆಪಿ ಸಜ್ಜು?

Webdunia
ಶನಿವಾರ, 12 ಜನವರಿ 2019 (17:07 IST)
ದೆಹಲಿಯಲ್ಲಿ ಆರಂಭವಾಗಿರುವ ಬಿಜೆಪಿಯ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಶಾಸಕರು  ದೆಹಲಿ ಯಾತ್ರೆ ಕೈಗೊಂಡಿದ್ದು, ಅಲ್ಲಿಯೇ ಆಪರೇಷನ್ ಕಮಲಕ್ಕೂ ಚಾಲನೆ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

 ರಾಜ್ಯ ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಅತೃಪ್ತಿ, ಅಸಮಾಧಾನದ ಲಾಭ ಪಡೆಯಲು ಬಿಜೆಪಿ ತನ್ನದೇ ಆದ ರಾಜಕೀಯ ದಾಳ ಉರುಳಿಸಿದ್ದು, ತೆರೆಮರೆಯಲ್ಲಿ ಅತೃಪ್ತ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದೆ.

ರಾಜ್ಯದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಮೂಡಿರುವ ಅಸಮಾಧಾನ, ಅತೃಪ್ತಿಯ ಲಾಭ ಪಡೆದು ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ, ಒಂದು ವೇಳೆ ಆಪರೇಷನ್ ಕಮಲ ಯಶಸ್ವಿಯಾದರೆ ಬಿಜೆಪಿ ಪಕ್ಷದ ಯಾವುದೇ ಶಾಸಕರುಗಳು ಕಾಂಗ್ರೆಸ್-ಜೆಡಿಎಸ್ಆಮಿಷಗಳಿಗೆ ಒಳಗಾಗದೇ ಪಕ್ಷದಲ್ಲೇ ಉಳಿಸಿಕೊಂಡು, ಒಗ್ಗಟ್ಟು ಕಾಪಾಡಲು ವ್ಯವಸ್ಥಿತವಾದ ಯೋಜನೆ ರೂಪಿಸಿ, ಶಾಸಕರನ್ನು ಭದ್ರಗೊಳಿಸುವತ್ತ ಚಿತ್ತ ಹರಿಸಿದೆ.

ಬಿಜೆಪಿಯ ಬಹುತೇಕ ಸದಸ್ಯರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ದೆಹಲಿಯಲ್ಲಿರುವ ಶಾಸಕರ ಜತೆ ವರಿಷ್ಠ ನಾಯಕರುಗಳ ಸಭೆ, ಸಮಾಲೋಚನೆಗಳು ನಡೆದಿವೆ. ಜತೆಗೆ ದೆಹಲಿ ನಾಯಕರು ಕಾಂಗ್ರೆಸ್ ಅತೃಪ್ತ ಶಾಸಕರುಗಳ ಜತೆಯೂ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments