ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಪ್ಲಾನ್?

Webdunia
ಮಂಗಳವಾರ, 28 ಮೇ 2019 (17:10 IST)
ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಸರಕಾರ ರಚಿಸುತ್ತಾರೆ ಎನ್ನುವ ನಂಬಿಕೆ ನನಗಿಲ್ಲ. ಹೀಗಂತ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.

ನನಗೆ ಬಂದ ಮಾಹಿತಿಯ ಪ್ರಕಾರ, ಬಿಜೆಪಿಯವರು ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ರಾಷ್ಟ್ರಪತಿ ಆಡಳಿತ ಹೇರಲು ಮುಂದಾಗಿದ್ದಾರೆ. ಬಳಿಕ ಚುನಾವಣೆಗೆ ಹೋಗಲು ಬಿಜೆಪಿಯವರು ಸಿದ್ದತೆ ನಡೆಸಿದ್ದಾರೆ. ಲೋಕ ಸಭೆಯಲ್ಲಿ ಸಿಕ್ಕ ಗೆಲುವಿನಿಂದ, ವಿಧಾನ ಸಭೆ ಚುನಾವಣೆಗೆ ಹೋದರೆ 150 ಸ್ಥಾನಗಳನ್ನ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕ ಚಾರದಲ್ಲಿ ಬಿಜೆಪಿ ನಾಯಕರಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲ್ಲರು ಮಂತ್ರಿ ಆಗಬೇಕು ಎನ್ನುವವರೇ, ಇದು ಸಾದ್ಯವಿಲ್ಲ. ಜೆಡಿಎಸ್ - ಕಾಂಗ್ರೆಸ್ ನವರು ಒಗ್ಗಟ್ಟಿನಿಂದ ಸರಕಾರ ನಡೆಸಿದ್ರೆ ಒಳ್ಳೆಯದು. ಇಲ್ಲದಿದ್ದರೆ ಕಷ್ಟ. ಮೈತ್ರಿಯಲ್ಲಿ ಹೆಚ್ಚುಕಡಿಮೆ ಆಗಿದೆ.  ಭಿನ್ನಾಭಿಪ್ರಾಯ ಮರೆತು ಎಲ್ಲರು ಒಗ್ಗಟ್ಟಾಗಿದ್ದಾರೆ. ಮೈತ್ರಿಯಲ್ಲಿ ಅಪಸ್ವರ ಬಾರದಂತೆ ನೋಡಿಕೊಳ್ಳಬೇಕು. ನಾನು ಸಹ ಮಂತ್ರಿಯಾಗಿಲ್ಲ, ನಾನು ಎಲ್ಲ ತ್ಯಾಗಕ್ಕೂ ಸಿದ್ದ, ಸರಕಾರ ಒಳ್ಳೆಯ ರೀತಿಯಲ್ಲಿ ನಡೆಯಬೇಕು. ಅದಕ್ಕಾಗಿ ಉಳಿದವರು ತ್ಯಾಗಕ್ಕೆ ಮುಂದಾಗಲಿ.

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸವಾಲಾಗಿ ಸ್ವೀಕರಿಸಿಕೊಂಡು ಗೊಂದಲಗಳನ್ನ ಬಗೆಹರಿಸಲಿ. ಕೆಲವು ಸಚಿವರು ರಾಜೀನಾಮೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಹೊಸಬರಿಗೆ ಅವಕಾಶ ಮಾಡಿಕೊಡಲಿ. ಇಂತಹ ಕ್ಲಿಷ್ಟಕರವಾದ ಸ್ಥಿತಿಯಲ್ಲಿ ಸರಕಾರ ನಡೆಯಬೇಕಾದರೆ, ಕೇಲವರು ತ್ಯಾಗ ಮಾಡಲೇಬೇಕು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments