Select Your Language

Notifications

webdunia
webdunia
webdunia
webdunia

ಮಂಗಳೂರಿನಲ್ಲಿ ಮತ್ತಷ್ಟು ಯುವಕರ ಪ್ರಾಣ ತೆಗೆಯಲು ಬಿಜೆಪಿ ಸಂಚು: ಯುಟಿ ಖಾದರ್

ಮಂಗಳೂರಿನಲ್ಲಿ ಮತ್ತಷ್ಟು ಯುವಕರ ಪ್ರಾಣ ತೆಗೆಯಲು ಬಿಜೆಪಿ ಸಂಚು: ಯುಟಿ ಖಾದರ್
ಬೆಂಗಳೂರು , ಸೋಮವಾರ, 4 ಸೆಪ್ಟಂಬರ್ 2017 (10:36 IST)
ಬೆಂಗಳೂರು: ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಪಿಎಫ್ ಐ ಮತ್ತು ಕೆಎಫ್ ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ನಡೆಸಲುದ್ದೇಸಿರುವ ಮಂಗಳೂರು ಚಲೋ ರ್ಯಾಲಿಗೆ ಸಚಿವ ಯುಟಿ ಖಾದರ್ ಕಿಡಿ ಕಾರಿದ್ದಾರೆ.

 
‘ಮಂಗಳೂರಿನಲ್ಲಿ ಈಗಾಗಲೇ ಶಾಂತಿ ನೆಲೆಸಿದೆ. ಆದರೆ ಬಿಜೆಪಿಯವರು ಈಗ ವೃಥಾ ರ್ಯಾಲಿ ನಡೆಸಿ ಶಾಂತಿ ಕೆಡಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಮತ್ತಷ್ಟು ಯುವಕರ ಪ್ರಾಣ ತೆಗೆಯಲು ಸಂಚು ನಡೆಸುತ್ತಿದ್ದಾರೆ’ ಎಂದು ವಿಧಾನಸೌಧದಲ್ಲಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಜಾಥಾ, ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದಕ್ಕೆ ಒಂದು ಉದ್ದೇಶವಿರಬೇಕು. ಮಂಗಳೂರು ಚಲೋ ಜಾಥಾದ ಉದ್ದೇಶವೇನು ಎಂದು ಖಾದರ್ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ.. ಸದ್ಯಕ್ಕೆ ನಿಮಗೆ 200 ನೋಟು ಭಾಗ್ಯವಿಲ್ಲ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸದ್ಯಕ್ಕೆ ನಿಮಗೆ 200 ನೋಟು ಭಾಗ್ಯವಿಲ್ಲ!