Webdunia - Bharat's app for daily news and videos

Install App

ಬಿಜೆಪಿಯಲ್ಲಿ ಭುಗಿಲೆದ್ದ ಪೈಪೋಟಿ ...!!!

Webdunia
ಶುಕ್ರವಾರ, 15 ಅಕ್ಟೋಬರ್ 2021 (16:04 IST)
ಬೆಂಗಳೂರು ನಗರ ಉಸ್ತುವಾರಿಗಾಗಿ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಈಗಾಗಲೇ ಬೀದಿಗೆ ಬಂದಿದೆ. ಈಗ ಇದೇ ಉಸ್ತುವಾರಿ ಜಟಾಪಟಿ ಸಂಪುಟವನ್ನೇ ಹೋಳಾಗಿಸುವ ಸೂಚನೆ ನೀಡಿದೆ. ಏಕೆಂದರೆ, ಈಗಾಗಲೇ ಹೊತ್ತಿ ಉರಿಯುತ್ತಿರುವ ಬೆಂಕಿಗೆ ಮತ್ತೊಬ್ಬ ಸಚಿವರು ತುಪ್ಪ ಸುರಿದಿದ್ದಾರೆ.
ಇದರ ಜೊತೆ ಬಿಜೆಪಿಯಲ್ಲಿ ಮೂಲ-ವಲಸಿಗ ಚರ್ಚೆಯೂ ಮತ್ತೆ ಮುನ್ನಲೆಗೆ ಬಂದಿದೆ.
ಹೌದು, ಕಳೆದೊಂದು ವಾರದಿಂದ ಬೆಂಗಳೂರು ನಗರ ಉಸ್ತುವಾರಿಗಾಗಿ ಸಚಿವರಾದ ವಿ. ಸೋಮಣ್ಣ ಮತ್ತು ಆರ್.ಅಶೋಕ್ ಮಧ್ಯೆ ವಾತಿನ ಯುದ್ಧ ಆರಂಭವಾಗಿತ್ತು. ಮಹಾನಗರದ ಪಟ್ಟವನ್ನ ನನಗೆ ನೀಡಿ ಎನ್ನವಂತೆ ವಿ.ಸೋಮಣ್ಣ ನೇರವಾಗಿ ಬೇಡಿಕ ಇಟ್ಟಿದ್ದರು. ಆದರೆ, ಆರ್. ಅಶೋಕ್ ನಾನೇನು ಬೆಂಗಳೂರು ಉಸ್ತುವಾರಿಗಾಗಿ ಕಾಯುತ್ತಿಲ್ಲ ಎನ್ನುತ್ತಲೇ ಸಿಎಂ ಬಳಿ ತನಗೆ ನೀಡುವಂತೆ ಮಸಲತ್ತು ನಡೆಸುತ್ತಿದ್ದರು.
ಬೆಂಗಳೂರು ನಗರದ ಮೇಲೆ ಆಧಿಪತ್ಯ ಸ್ಥಾಪಿಸಲು ಪೈಪೋಟಿ ನಡೆಯುತ್ತಿದೆ. ಹಿರಿಯ ಸದಸ್ಯ ಆಗಿರುವ ವಿ. ಸೋಮಣ್ಣ ಹಾಗೂ ಆರ್ ಅಶೋಕ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹಾದಿ ಬೀದಿ ರಂಪಾಟ ಕೂಡ ಮಾಡಿಕೊಂಡಿದ್ದಾರೆ. ಆರ್. ಅಶೋಕ್ ಬಗ್ಗೆ ನೇರ ವಾಗ್ದಾಳಿ ನಡೆಸಿರುವ ಸೋಮಣ್ಣ, ನಾನು ಸಚಿವನಾದಾಗ ಸಾಮ್ರಾಟ್ ಆರ್ ಅಶೋಕ್ ಇನ್ನೂ ಶಾಸಕನಾಗಿ ಇರಲಿಲ್ಲ. ಹಿರಿಯನಿದ್ದೇನೆ, ಬೆಂಗಳೂರು ಉಸ್ತುವಾರಿ ಕೊಟ್ಟರೆ ಸೂಕ್ತ ರೀತಿಯಲ್ಲಿ ನಿಭಾಯಿಸುತ್ತೇನೆ ಎಂದಿದ್ದಾರೆ.
ಹಿರಿಯ ಸಚಿವ ವಿ. ಸೋಮಣ್ಣರ ಹೇಳಿಕೆಗೆ ಸಾವಧಾನದಿಂದಲೇ ಉತ್ತರ ಕೊಟ್ಟಿರುವ ಆರ್. ಅಶೋಕ್, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments