Webdunia - Bharat's app for daily news and videos

Install App

ರಾಷ್ಟ್ರಹಿತದ ಹಿನ್ನೆಲೆಯಲ್ಲೇ ಬಿಜೆಪಿ ರಾಜಕಾರಣ: ಸಿ.ಟಿ.ರವಿ

Sampriya
ಭಾನುವಾರ, 23 ಜೂನ್ 2024 (12:54 IST)
x
ಬೆಂಗಳೂರು: ಬಿಜೆಪಿ, ರಾಷ್ಟ್ರಹಿತವನ್ನು ಬಿಟ್ಟುಕೊಡದೆ ರಾಷ್ಟ್ರಹಿತದ ಹಿನ್ನೆಲೆಯಲ್ಲೇ ರಾಜಕಾರಣ ಮಾಡುತ್ತ ಬಂದಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಅಭಿಪ್ರಾಯಪಟ್ಟರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಏರ್ಪಡಿಸಿದ್ದ ಜಗನ್ನಾಥ ರಾವ್ ಜೋಶಿಯವರ ಜನ್ಮ ದಿನ ಮತ್ತು ಶ್ಯಾಮಪ್ರಸಾದ ಮುಖರ್ಜಿಯವರ ಬಲಿದಾನ ದಿವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕದಿಂದ ಹೊರಗೆ, ಮಧ್ಯಪ್ರದೇಶದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಜಗನ್ನಾಥ ರಾವ್ ಜೋಶಿ ಅವರು ಕಾರ್ಯಕರ್ತರಿಗೆ ಪ್ರೇರಕರು. ಅವರ ಹೆಸರನ್ನೇ ಈ ಭವನಕ್ಕೂ ಇಟ್ಟಿದ್ದೇವೆ ಎಂದು ವಿವರಿಸಿದರು. ಸಂಘಟಕ, ಮಾರ್ಗದರ್ಶಕರಾಗಿ ಪಕ್ಷದ ರಾಜ್ಯ ಮತ್ತು ದೇಶದ ಸಂಘಟನೆಯ ನಾಯಕತ್ವ ವಹಿಸಿ ಅವರು ಕರ್ನಾಟಕ ಕೇಸರಿ ಎಂಬ ಹೆಸರಿಗೆ ತಕ್ಕಂತೆ ಬದುಕಿದವರು ಎಂದು ತಿಳಿಸಿದರು.

ನರಗುಂದದಲ್ಲಿ ಅವರು ಹುಟ್ಟಿದ ಮನೆಯನ್ನು ಸ್ಮಾರಕವಾಗಿ ಪರಿವರ್ತನೆ ಮಾಡಲಾಗಿದೆ. ಅಲ್ಲಿ ಅವರ ಬದುಕಿನ ಸಂಗತಿಗಳ ಚಿತ್ರಣ ಲಭಿಸುತ್ತದೆ. ವರ್ತಮಾನ ಮತ್ತು ಭವಿಷ್ಯದ ಪೀಳಿಗೆಗೂ ಅವರ ಜೀವನಾನುಭವ ಸಿಗಲಿ ಎಂದು ಸ್ಮಾರಕ ಮಾಡಲಾಗಿದೆ ಎಂದು ಹೇಳಿದರು.

ಶ್ಯಾಮಪ್ರಸಾದ ಮುಖರ್ಜಿಯವರು ತಕ್ಕಮಟ್ಟಿನ ಶ್ರೀಮಂತ ಮನೆತನದಲ್ಲಿ ಅವರ ಜನ್ಮ ಆಗಿತ್ತು. ಕಿರಿಯ ವಯಸ್ಸಿಗೇ ಕಲ್ಕತ್ತ ವಿಶ್ವವಿದ್ಯಾಲಯದ ಕುಲಪತಿಯಾಗಿ ಅವರು ಕೆಲಸ ಮಾಡಿದ್ದರು. ಹಿಂದೂ ಮಹಾಸಭೆಯ ಕಾರ್ಯಕಾರಿ ಅಧ್ಯಕ್ಷ, ಅಧ್ಯಕ್ಷರಾಗಿದ್ದರು. ರಾಷ್ಟ್ರೀಯ ಸರಕಾರದಲ್ಲಿ ಸಚಿವರಾಗಿದ್ದರು. ಇವರು ಕೇವಲ ಸುಶಿಕ್ಷಿತ, ವಾಗ್ಮಿಯಲ್ಲ; ರಾಜನೀತಿ ಕ್ಷೇತ್ರದ ಕುಶಲ ಸಂಘಟಕನೂ ಆಗಿದ್ದು, ಅಪ್ರತಿಮ ರಾಷ್ಟ್ರವಾದಿಯಾಗಿ ಕಾರ್ಯನಿರ್ವಹಿಸಿದವರು ಎಂದು ವಿಶ್ಲೇಷಿಸಿದರು. ರಾಷ್ಟ್ರಹಿತದ ಜೊತೆ ಯಾವತ್ತೂ ರಾಜಿ ಮಾಡಿಕೊಳ್ಳದ ವ್ಯಕ್ತಿತ್ವ ಅವರದು ಎಂದು ನುಡಿದರು.

370ನೇ ವಿಧಿ ರದ್ದು ಮಾಡುವ ಜನಸಂಘದ ಮೊದಲ ಹೋರಾಟ ನಡೆದು 69 ವರ್ಷಗಳ ಬಳಿಕ, ಅವರ ಬಲಿದಾನವಾಗಿ 69 ವರ್ಷಗಳ ನಂತರ ನಾವು 370ನೇ ವಿಧಿ ರದ್ದುಪಡಿಸಿ, ಕಾಶ್ಮೀರಕ್ಕೂ ಭಾರತದ ಸಂವಿಧಾನ, ಕಾಶ್ಮೀರಕ್ಕೂ ಮೀಸಲಾತಿ ಅನುಕೂಲ, ಕಾಶ್ಮೀರದ ಜನರೂ ಭಾರತೀಯತೆಯ ಒಂದು ಭಾಗ ಎಂಬುದನ್ನು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಈಡೇರಿಸಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಶಾಸಕ ಬಸವರಾಜ್ ಮತ್ತಿಮೂಡ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ವಿಭಾಗ ಸಂಘಟನಾ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ, ವಿಭಾಗ ಪ್ರಭಾರಿ ರಾಜೇಶ್ ಕಾವೇರಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪಕ್ಷದ ಪ್ರಮುಖರು ಕಾರ್ಯಕರ್ತರು ಮತ್ತು ಕಾರ್ಯಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments