Select Your Language

Notifications

webdunia
webdunia
webdunia
webdunia

ಮಠಯಾತ್ರೆ ಶುರು ಮಾಡಿದ ಬಿಜೆಪಿ ಅಧ್ಯಕ್ಷ ನಡ್ಡಾ

ಬಿಜೆಪಿ
ಬೆಂಗಳೂರು : ಎಲೆಕ್ಷನ್ ಸಮೀಪಿಸುತ್ತಿರುವಂತೆಯೇ ಬಿಜೆಪಿಯ ಹೈಕಮಾಂಡ್ ನಾಯಕರು ಮೇಲಿಂದ ಮೇಲೆ ದಂಡಯಾತ್ರೆ ಆರಂಭಿಸಿದ್ದಾರೆ.

ಮೋದಿ, ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಪಿ ನಡ್ಡಾ ವಿಶೇಷವಾಗಿ ಪ್ರಮುಖವಾಗಿ ನಾಲ್ಕು ಸಮುದಾಯಗಳನ್ನು ಟಾರ್ಗೆಟ್ ಮಾಡಿಕೊಂಡು ಮಠಯಾತ್ರೆ ನಡೆಸುತ್ತಿದ್ದಾರೆ.

ಪ್ರವಾಸದ ಮೊದಲ ದಿನವಾದ ಗುರುವಾರ ತುಮಕೂರಿನ ಸಿದ್ದಗಂಗಾ ಮಠ, ಚಿತ್ರದುರ್ಗದ ಮಾದಾರ ಚನ್ನಯ್ಯ ಮಠ, ಸಿರಿಗೆರೆಯ ತರಳಬಾಳು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಭೇಟಿ ಮಧ್ಯೆ ಪಕ್ಷದ ಶಕ್ತಿ ಕೇಂದ್ರಗಳ ಪ್ರಮುಖರ ಜೊತೆ, ಎಸ್ಸಿ, ಎಸ್ಟಿ, ಓಬಿಸಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಶಿರಾದಲ್ಲಿ ನಡ್ಡಾ ಮತ ಬೇಟೆ