Webdunia - Bharat's app for daily news and videos

Install App

ಬೈಕ್ ರ‍್ಯಾಲಿ ತಡೆಗೆ ಆಕ್ರೋಶ: ಬಿಜೆಪಿಯಿಂದ ಬೃಹತ್ ಪ್ರತಿಭಟನೆ

Webdunia
ಬುಧವಾರ, 6 ಸೆಪ್ಟಂಬರ್ 2017 (14:50 IST)
ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾ ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರ‍್ಯಾಲಿಗೆ ತಡೆಹಿಡಿದಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಶಿವಮೂರ್ತಿ ವೃತ್ತದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಆಯನೂರು ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನೆ ನಡೆಸಲು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಅಲ್ಲದೆ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನ ಮುರಿದು ಒಳನುಗ್ಗಿ ಪ್ರತಿಭಟನೆ ನಡೆಸಿದರು. 2 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಈ ಸಂದರ್ಭದಲ್ಲಿ ಈಶ್ವರಪ್ಪ ಸೇರಿದಂತೆ ಹಲವು ಕಾರ್ಯಕರ್ತರನ್ನ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments