Webdunia - Bharat's app for daily news and videos

Install App

ಸದನದಲ್ಲಿ ರಮಾನಾಥ್ ರೈ ವಿಚಾರಕ್ಕೆ ಗದ್ದಲ

Webdunia
ಸೋಮವಾರ, 19 ಜೂನ್ 2017 (12:17 IST)
ಬೆಂಗಳೂರು: ಕಲ್ಲಡ್ಕ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಹಿಂದೂ ಸಂಘಟನೆ ನಾಯಕ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಲು ಸಚಿವ ರಮಾನಾಥ್ ರೈ ಬಹಿರಂಗವಾಗಿಯೇ ಆದೇಶ ನೀಡಿದ್ದರು ಎನ್ನಲಾದ ವಿಡಿಯೋ ಇಂದಿನ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

 
ಬಹಿರಂಗ ಸಭೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪ್ರಭಾಕರ ಭಟ್ಟರನ್ನು ಬಂಧಿಸಲು ಆದೇಶ ನೀಡಲು ರಮಾನಾಥ ರೈ ಯಾರು? ಸಚಿವ ರೈ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ಗದ್ದಲವೇರ್ಪಟ್ಟಿತು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮುಂಬೈನಿಂದ ಕರೆ ಮಾಡಿ ಪ್ರಭಾಕರ ಭಟ್ಟರನ್ನು ಬಂಧಿಸಿದರೆ ನಿಮಗೆ ಮುಂದಿನ ಚುನಾವಣೆಯಲ್ಲಿ ಉಳಿಗಾಲವಿರಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ.

ಈ ವಿಚಾರವಾಗಿ ಸ್ಪೀಕರ್ ಕೋಳಿವಾಡ ಮಧ್ಯ ಪ್ರವೇಶಿಸಿ ಉಭಯ  ಪಕ್ಷದ ಸದಸ್ಯರನ್ನು ಸಮಾಧಾನಿಸಲು ಯತ್ನಿಸಿದರು. ಆದರೆ ಮತ್ತೆ ಸ್ವತಃ ಸಚಿವ ರೈ ಸ್ಪಷ್ಟನೆ ನೀಡಲು ಮುಂದಾದಾಗ ವಿಪಕ್ಷ ಸದಸ್ಯರು ಗದ್ದಲವೆಬ್ಬಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments