ಮಹಾಲಕ್ಷ್ಮೀ ಲೇಔಟ್‍ನ ಕಂಠೀರವ ಸ್ಟುಡಿಯೋ ಬಳಿ ರಸ್ತೆ ತಡೆ ಚಳವಳಿ

Krishnaveni K
ಬುಧವಾರ, 24 ಸೆಪ್ಟಂಬರ್ 2025 (12:28 IST)
ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚದೇ ನಿರ್ಲಕ್ಷ್ಯ ವಹಿಸಿದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಇಂದು ಮಹಾಲಕ್ಷ್ಮೀ ಲೇಔಟ್‍ನ ಕಂಠೀರವ ಸ್ಟುಡಿಯೋ ಬಳಿ ಬಿಜೆಪಿ ವತಿಯಿಂದ ರಸ್ತೆ ತಡೆ ಚಳವಳಿ ನಡೆಸಲಾಯಿತು.

ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ರಾಜ್ಯ ಮಾಧ್ಯಮ ಪ್ರಕೋಷ್ಠದ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಮತ್ತು ಪಕ್ಷದ ಕಾರ್ಯರ್ತರು ಉಪಸ್ಥಿತರಿದ್ದರು. 
ನಗರದಲ್ಲಿ 10 ಸಾವಿರ ಗುಂಡಿಗಳಿವೆ ಎಂದು ಡಿಸಿಎಂ ಶಿವಕುಮಾರ್ ಅವರೇ ಹೇಳಿದ್ದಾರೆ. ಕೇವಲ ಹೇಳಿಕೆಗಷ್ಟೇ ಗುಂಡಿ ಮುಚ್ಚುವ ಕಾರ್ಯ ಸೀಮಿತವಾಗದಿರಲಿ ಎಂದು ನೆ.ಲ. ನರೇಂದ್ರಬಾಬು ಅವರು ತಿಳಿಸಿದರು. ಅಧಿಕಾರಿಗಳು ಮತ್ತು ಎಂಜಿನಿಯರ್‍ಗಳು ಎ.ಸಿ. ರೂಮಿನಿಂದ ಹೊರಬಂದು ಜನರ ಪ್ರಾಣ ಉಳಿಸಬೇಕೆಂದು ಆಗ್ರಹಿಸಿದರು.

28 ಕ್ಷೇತ್ರಗಳಲ್ಲಿ ಗುಂಡಿ ಮುಚ್ಚಲು ಕಾಂಗ್ರೆಸ್ ಸರಕಾರದ ಬಳಿ ದುಡ್ಡಿಲ್ಲ ಎಂದು ಎಸ್. ಹರೀಶ್ ಅವರು ಆಕ್ಷೇಪಿಸಿದರು. ಗುಂಡಿ ಮುಚ್ಚಲು 1100 ಕೋಟಿ ಹಣ ಬಿಡುಗಡೆ ಮಾಡಿದ್ದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಯಾವ ಗುಂಡಿ ಮುಚ್ಚಿದ್ದೀರಿ? ಎಲ್ಲಿ ಮುಚ್ಚಿದ್ದೀರಿ ಎಂದು ಪ್ರಶ್ನಿಸಿದರು. 1100 ಕೋಟಿ ಮೊತ್ತದ ಲೆಕ್ಕ ಕೊಡಿ ಎಂದು ಒತ್ತಾಯಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments