ಬಿಬಿಎಂಪಿ ಅಡಳಿತ ಪಕ್ಷದ ವಿರುದ್ಧ ಬಿಜೆಪಿ ಆಕ್ರೋಶ

Webdunia
ಗುರುವಾರ, 28 ಸೆಪ್ಟಂಬರ್ 2017 (13:13 IST)
ಬಿಬಿಎಂಪಿ ಅಡಳಿತ ಪಕ್ಷದ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದೆ.
ಮಾಜಿ ಡಿಸಿಎಂ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ, ಬಿಬಿಎಂಪಿಯ ಅಡಳಿತ ಪಕ್ಷ ರಸ್ತೆಗಳಲ್ಲಿ ಗುಂಡಿಗಳ ಸಾಧನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕಾಂಗ್ರೆಸ್ ಪಕ್ಷ 40 ವರ್ಷಗಳ ಅವಧಿಯವರಿಗೆ ಬಿಬಿಎಂಪಿಯಲ್ಲಿ ಅಡಳಿತ ಮಾಡಿದೆ. ಆದಾಗ್ಯೂ ಬೆಂಗಳೂರಿನ ಜನತೆಗೆ ಉತ್ತಮ ಮೂಲಸೌಕರ್ಯ ಒದಗಿಸಿಲ್ಲ. ಮಳೆಗಾಲದಲ್ಲಿ ಹಾವು ಚೇಳುಗಳು ಮನೆಯೊಳಗೆ ನುಗ್ಗುತ್ತಿವೆ. ಬಿಬಿಎಂಪಿ ಕಾರ್ಯನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
 
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಅನೇಕ ಬಡಾವಣೆಗಳು ದ್ವೀಪಗಳಂತಾಗಿವೆ. ನೀರು ಮನೆಗೆ ನುಗ್ಗಿದ್ದರಿಂದ ಸಾಮಾನ್ಯ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಮುಂದಿನ ಸುದ್ದಿ
Show comments