Webdunia - Bharat's app for daily news and videos

Install App

ದೇಯಿಬೈದೆತಿ ವಿಗ್ರಹಕ್ಕೆ ಅವಮಾನ ಪ್ರಕರಣ: ಬಿಜೆಪಿಯಿಂದ ಪಾದಯಾತ್ರೆ

Webdunia
ಮಂಗಳವಾರ, 10 ಅಕ್ಟೋಬರ್ 2017 (15:39 IST)
ಮಂಗಳೂರು: ತುಳುನಾಡಿನ ಮಹಾಮಾತೆ ದೇಯಿಬೈದೆತಿ ವಿಗ್ರಹವನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ಬೃಹತ್ ಪಾದಯಾತ್ರೆಗೆ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.

ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿಕೇಂದ್ರಗಳ ರಕ್ಷಣೆಗಾಗಿ ಬಿಜೆಪಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಚಾಲನೆ ನೀಡುವುದಕ್ಕೂ ಮುನ್ನ ಸಂಸದ ನಳಿನ್ ಕುಮಾರ್ ಕಟೀಲ್ ಪುತ್ತೂರಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು.

ತುಳುನಾಡಿನ ವೀರ ಪುರುಷರಾದ "ಅಮರ್ ಬೊಳ್ಳಿಲು" ಕೋಟಿ ಚೆನ್ನಯ್ಯರಿಗೆ ಜನ್ಮ ನೀಡಿದ ಮಹಾಮಾತೆ ಅಪ್ಪೆ ದೇಯಿ ಬೈದೆತಿ ವಿಗ್ರಹಕ್ಕೆ ಅವಮಾನ ಮಾಡಲಾಗಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿತ್ತು. ಬ್ರಹತ್ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments