Select Your Language

Notifications

webdunia
webdunia
webdunia
webdunia

ಬಿಜೆಪಿ ಅಭ್ಯರ್ಥಿ ಪಕ್ಷಾಂತರ ಇಫೆಕ್ಟ್: ರಾಮನಗರ ಉಪಚುನಾವಣೆ ಮುಂದೂಡಿಕೆಯಾಗುತ್ತಾ?

ಬಿಜೆಪಿ ಅಭ್ಯರ್ಥಿ ಪಕ್ಷಾಂತರ ಇಫೆಕ್ಟ್: ರಾಮನಗರ ಉಪಚುನಾವಣೆ ಮುಂದೂಡಿಕೆಯಾಗುತ್ತಾ?
ಬೆಂಗಳೂರು , ಶುಕ್ರವಾರ, 2 ನವೆಂಬರ್ 2018 (09:54 IST)
ಬೆಂಗಳೂರು: ನವಂಬರ್ 3 ರಂದು ನಡೆಯಬೇಕಿರುವ ರಾಮನಗರ ಲೋಕಸಭೆ ಕ್ಷೇತ್ರದ ಉಪಚುನಾವಣಾ ಕಣದಿಂದ ಕಡೇ ಕ್ಷಣದಲ್ಲಿ ಹಿಂದೆ ಸರಿದು ಕಾಂಗ್ರೆಸ್ ಸೇರಿದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ರಿಂದಾಗಿ ಚುನಾವಣೆ ಮುಂದೂಡಿಕೆಯಾಗುತ್ತಾ?

ಚುನಾವಣೆಗೆ ಎರಡು ದಿನಗಳಿರುವಾಗ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಚುನಾವಣೆ ಕಣದಿಂದ ಹಿಂದೆ ಸರಿದ ಎಲ್ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದ್ದರು.

ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೂಚನೆ ಮೇರೆಗೆ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ಚಿ.ನಾ. ರಾಮು ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ. ಪಕ್ಷದ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಪಕ್ಷಾಂತರ ಮಾಡಿರುವ ಬಗ್ಗೆ ಅವರು ಆಯೋಗಕ್ಕೆ ದೂರು ನೀಡಿದ್ದಾರೆ. ಇದೀಗ ಚುನಾವಣಾ ಆಯೋಗ ಯಾವ ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಇಂದು, ನಾಳೆ ಬೆಂಗಳೂರಿಗರಿಗೆ ಹವಾಮಾನ ಇಲಾಖೆ ಎಚ್ಚರಿಕೆ