ಬಿಜೆಪಿ ಆರ್.ಎಸ್. ಎಸ್. ಚುನಾವಣಾ ಮಂತ್ರ ರಣತಂತ್ರ..!!

Webdunia
ಗುರುವಾರ, 14 ಜುಲೈ 2022 (15:51 IST)
ಮುಂಬರುವ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ತಂತ್ರಗಾರಿಕೆ ಹೆಣೆಯುವ ಸಂಬಂಧ ಇಂದು ಸಂಜೆ ಬೆಂಗಳೂರಿನ ಹೊರವಲಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಹಾಗೂ ಸಂಘ ಪರಿವಾರದ ಮುಖಂಡರನ್ನು ಒಳಗೊಂಡ ಮಹತ್ವದ ಚಿಂತನ-ಮಂಥನ ಸಭೆ ನಡೆಯಲಿದೆ.
ಬೆಂಗಳೂರಿನ ಹೊರವಲಯದಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದ ಗೌಡ, ಹಿರಿಯ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಡಾ.ಅಶ್ವತ್ಥ ನಾರಾಯಣ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿ ಆಯ್ದ ಕೆಲವು ನಾಯಕರು ಮಾತ್ರ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೊರತುಪಡಿಸಿ ಅಧಿಕೃತವಾಗಿ ಮತ್ತೆ ಯಾರು ಪಾಲ್ಗೊಳ್ಳಲಿದ್ದಾರೆ ಎನ್ನುವುದನ್ನು ಗೌಪ್ಯವಾಗಿಡಲಾಗಿದೆ.
 
ಸಂಜೆ ಎಲ್ಲ ನಾಯಕರು ಬೆಂಗಳೂರು ಹೊರ ವಲಯದ ರೆಸಾರ್ಟ್‍ಗೆ ತೆರಳಿ ಅಲ್ಲಿಯೇ ಸಭೆ ನಡೆಸಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆಯಿಂದ ಸಂಜೆವರೆಗೂ ಸುದೀರ್ಘ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments