Webdunia - Bharat's app for daily news and videos

Install App

ದಕ್ಷಿಣ ಭಾರತದ ಇತಿಹಾಸದಲ್ಲೇ ಬಿಜೆಪಿ ಸಾಧನೆ

Webdunia
ಮಂಗಳವಾರ, 14 ಮಾರ್ಚ್ 2023 (14:05 IST)
2007ರಲ್ಲಿ ಜೆಡಿಎಸ್ನಿಂದಾದ ವಿಶ್ವಾಸ ದ್ರೋಹ, ರಾಜಕೀಯದಲ್ಲಾದ ಕೆಲವು ನಾಟಕೀಯ ಬೆಳವಣಿಗೆಗಳನ್ನೇ ಮುಖ್ಯ ವಿಷಯವಾಗಿಸಿಕೊಂಡು 2008ರ ಚುನಾವಣೆ ಎದುರಿಸಿದ ಬಿಜೆಪಿಗೆ ಅಚ್ಚರಿಯ ಯಶಸ್ಸು ದೊರೆಯಿತು.

2008ರ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 110 ಸ್ಥಾನ ಗಳಿಸಿ ದೊಡ್ಡಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ 80 ಸ್ಥಾನಗಳನ್ನು ಜಯಿಸಿದರೆ, ಜೆಡಿಎಸ್ ಕೇವಲ 28 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತು. ಉಳಿದಂತೆ ಪಕ್ಷೇತರ ಆರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಆರು ಪಕ್ಷೇತರ ಶಾಸಕರ ನೆರವಿನಿಂದ ಸರ್ಕಾರ ರಚಿಸಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು.

ದಕ್ಷಿಣ ಭಾರತದಲ್ಲೇ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಿ ಇತಿಹಾಸ ಬರೆಯಿತು. ಬಳಿಕ ದೇಶದಲ್ಲೇ ಮೊದಲ ಬಾರಿಗೆ ಆಪರೇಷನ್ ಕಮಲಕ್ಕಿಳಿದ ಬಿಜೆಪಿ ಪ್ರತಿಪಕ್ಷಗಳ ಶಾಸಕರನ್ನ ಸೆಳೆದು ರಾಜೀನಾಮೆ ಕೊಡಿಸಿ ಸರ್ಕಾರದ ಬಲ ಹೆಚ್ಚಿಸಿಕೊಂಡಿತು. ಸಂಖ್ಯಾಬಲದಿಂದ ಸರ್ಕಾರ ಸುಭದ್ರವಾಗಿದ್ದರೂ ಆಂತರಿಕ ಭಿನ್ನಮತ ಯಡಿಯೂರಪ್ಪ ಅವರಿಗೆ ಮಗ್ಗಲು ಮುಳ್ಳಾಗಿ ಕಾಡಿತು.

ಪ್ರತಿಪಕ್ಷಗಳ ಹದ್ದಿನಕಣ್ಣು, ಸಾಲುಸಾಲು ಅವ್ಯವಹಾರದ ದಾಖಲೆಗಳು ಬಿಡುಗಡೆಯಾಗಿದ್ದು ಯಡಿಯೂರಪ್ಪ ಅವರನ್ನು ಮತ್ತಷ್ಟು ಹೈರಾಣಾಗಿಸಿತು. ಇದನ್ನೇ ಬಂಡವಾಳ ಮಾಡಿಕೊಂಡ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲಿ ಬಳ್ಳಾರಿಗೆ ಪಾದಯಾತ್ರೆ ನಡೆಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments