ಇಂದು ಬಿಜೆಪಿಯಿಂದ ಅದ್ಧೂರಿ ಜನಸ್ಪಂದನ ಸಮಾವೇಶ

Webdunia
ಶನಿವಾರ, 10 ಸೆಪ್ಟಂಬರ್ 2022 (09:37 IST)
ಚಿಕ್ಕಬಳ್ಳಾಪುರ : ಮುಂದಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಈ ಸಿದ್ಧತೆಯ ಭಾಗವಾಗಿ ದೊಡ್ಡಬಳ್ಳಾಪುರದಲ್ಲಿ ಇಂದು ಬೃಹತ್ ಜನಸ್ಪಂದನ ಸಮಾವೇಶ ಆಯೋಜಿಸಲಾಗಿದೆ.

ಜನಸ್ಪಂದನ ಸಮಾವೇಶದ ಮೂಲಕ 2023ರ ಚುನಾವಣೆಗೆ ರಾಜ್ಯ ಬಿಜೆಪಿ ದೊಡ್ಡಬಳ್ಳಾಪುರದಿಂದ ಕಹಳೆ ಮೊಳಗಿಸುತ್ತಿದೆ. 40 ಎಕರೆ ಮೈದಾನದಲ್ಲಿ ಜನಸ್ಪಂದನ ಕಾರ್ಯಕ್ರಮ ಬೃಹತ್ ವೇದಿಕೆ ಸಿದ್ಧವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಯನ್ನು ಸಿಎಂ ಬೊಮ್ಮಾಯಿ ಜನರ ಮುಂದಿಡಲಿದ್ದಾರೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಉಳಿದಂತೆ ರಾಜ್ಯ ಬಿಜೆಪಿ ನಾಯಕರು, ಸಚಿವರು, ಸಂಸದರು, ಶಾಸಕರು, ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.

ಸಮಾವೇಶಕ್ಕೆ 1,200*140 ಅಡಿ ಉದ್ದ ಮತ್ತು ಅಗಲ ವಿಸ್ತೀರ್ಣದ ಬೃಹತ್ ವೇದಿಕೆ ನಿರ್ಮಾಣಗೊಂಡಿದ್ದು, ಸುಮಾರು 100 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ 3 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. 

ಎಲ್ಇಡಿ ಸ್ಕ್ರೀನ್ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. 15 ಅಡಿ ಎತ್ತರ, 90 ಅಡಿ ಅಗಲದ ಬೃಹತ್ ಎಲ್ಇಡಿ ಸ್ಕ್ರೀನ್ ಹಾಕಲಾಗಿದ್ದು ಕಾರ್ಯಕರ್ತರಿಗೆ ಉಪಹಾರ ಮತ್ತು ಊಟಕ್ಕಾಗಿ 203 ಕೌಂಟರ್ಗಳ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments