Webdunia - Bharat's app for daily news and videos

Install App

ಪಠ್ಯಪುಸ್ತಕ ಹೊರೆ ಇಳಿಕೆಗೆ ಬಿಜೆಪಿ ಹೀಗ್ಯಾಕೆ ಹೇಳ್ತು?

Webdunia
ಶನಿವಾರ, 4 ಮೇ 2019 (16:56 IST)
ಪಠ್ಯಪುಸ್ತಕ ಹೊರೆ ಇಳಿಕೆ ಸಂಬಂಧ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ.

ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಮಾತನಾಡಿದ್ದು, ಈಗಲಾದರೂ ಶಾಲಾ ಮಕ್ಕಳಿಗೆ ಹೊರೆಯಾಗಿದೆ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ. ಹಿಂದೆ ನಮ್ಮ ಹೆಚ್.ಆರ್.ಡಿ.ಸಚಿವ ಪ್ರಕಾಶ್ ಜಾವ್ಡೇಕರ್ ಕೂಡ ಶಾಲಾ ಮಕ್ಕಳ ಹೊರೆ ಅರ್ಧದಷ್ಟು ಕಡಿಮೆ ಮಾಡುವುದಾಗಿ ಹೇಳಿದ್ದರು.

ಪಠ್ಯದ ಹೊರೆ ಕಡಿಮೆ ಮಾಡಬೇಕು. ಆದರೆ ಅದಕ್ಕೆ ಸಾಕಷ್ಟು ಪೂರ್ವ ತಯಾರಿ ಬೇಕು.   ಮಕ್ಕಳ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಜಿಲ್ಲಾ ರ್ಯಾಂಕ್ ಪದ್ಧತಿ  ಕೈ ಬಿಡುವ ಚಿಂತನೆ ನಡೆಸಿತ್ತು. ಈಗ ಅದೇ ಜಿಲ್ಲಾ ರ್ಯಾಂಕ್ ಪದ್ಧತಿ ರಾಜಕೀಯಕ್ಕೆ ಬಳಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ‌.

ಜಿಲ್ಲಾ ಶೈಕ್ಷಣಿಕ ಸಾಧನೆಗೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾರಣ. ಈಗಲಾದರೂ ಸರ್ಕಾರ ಜಿಲ್ಲಾ  ರಾಂಕಿಂಗ್ ಪದ್ಧತಿಯನ್ನು ರದ್ದು ಮಾಡಬೇಕು ಎಂದು ಆಗ್ರಹ ಮಾಡಿದ್ರು. ಪುಸ್ತಕ ಭಾರ ಕಡಿಮೆಮಾಡಲು ಹೋಗಿ ಶಿಕ್ಷಣದ ಮೌಲ್ಯ ಕುಂದಬಾರದು ಎಂದೂ ಶಹಪೂರ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments