Select Your Language

Notifications

webdunia
webdunia
webdunia
webdunia

ಬಿಜೆಪಿಯ ಪತ್ರ ರಾಜಕೀಯದಿಂದ ಏಕತೆಗೆ ಧಕ್ಕೆ– ದಿನೇಶ ಗುಂಡೂರಾವ್

ಬಿಜೆಪಿಯ ಪತ್ರ ರಾಜಕೀಯದಿಂದ ಏಕತೆಗೆ ಧಕ್ಕೆ– ದಿನೇಶ ಗುಂಡೂರಾವ್
ಬೆಂಗಳೂರು , ಭಾನುವಾರ, 24 ಡಿಸೆಂಬರ್ 2017 (15:24 IST)
ಮಹಾದಾಯಿ ವಿಚಾರದಲ್ಲಿ ಬಿಜೆಪಿಯ ಪತ್ರ ರಾಜಕೀಯದಿಂದ ಎರಡು ರಾಜ್ಯಗಳ ಏಕತೆಗೆ ಧಕ್ಕೆ ಉಂಟಾಗುತ್ತಿದೆ. ಈ ವಿಚಾರ ಕರ್ನಾಟಕ್ಕೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗುವ ಸಾಧ್ಯತೆಗಳಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಆತಂಕ ವ್ಯಕ್ತಪಡಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವನ್ನು ಚುನಾವಣೆಗೆ ಬಳಕೆ ಮಾಡಲು ಬಿಜೆಪಿ ರಾಜಕೀಯ ಮಾಡುತ್ತಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿಯ ರಾಜಕೀಯ ಕುತಂತ್ರದಿಂದ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಅನ್ಯಾಯವಾಗುವ ಆತಂಕವಿದ್ದು, ಇದರಿಂದ ದುಬರ್ಲವಾಗುವ ಸಾಧ್ಯತೆ ಇದೆ ಎಂದಿದ್ದಾರೆ.
 
ಗೋವಾ ಸರ್ಕಾರ ಮಾತುಕತೆಗೆ ಸಮಯ ನಿಗದಿಪಡಿಸಿದ್ದರೆ ರಾಜ್ಯ ಸರ್ಕಾರ ಎಲ್ಲಾ ಪಕ್ಷಗಳೊಂದಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮವಾಗಿ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸಿದ್ಧವಿದೆ. ಆದರೆ, ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹುಟ್ಟಿದ ಮೂರೇ ದಿನಕ್ಕೆ ಮಗುವನ್ನು ಬಿಟ್ಟುಹೋದ ತಾಯಿ!