Webdunia - Bharat's app for daily news and videos

Install App

ಕೆಎನ್ ರಾಜಣ್ಣ ಕಿತ್ತು ಹಾಕಿದ್ದು ಇದೇ ಕಾರಣಕ್ಕೆ ಅಂತಿದ್ದಾರೆ ಬಿಜೆಪಿ ನಾಯಕರು

Krishnaveni K
ಮಂಗಳವಾರ, 12 ಆಗಸ್ಟ್ 2025 (09:09 IST)
Photo Credit: BJP X
ಬೆಂಗಳೂರು: ಸಚಿವ ಸ್ಥಾನದಿಂದ ದಿಡೀರ್ ಆಗಿ ಕೆಎನ್ ರಾಜಣ್ಣ ಅವರನ್ನು ಕಿತ್ತು ಹಾಕಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಎನ್ ರಾಜಣ್ಣರನ್ನು ಕಿತ್ತು ಹಾಕಿರುವುದರ ಹಿಂದಿನ ಕೈ ಯಾರದ್ದು ಎಂದು ಈಗ ಎಲ್ಲರ ಪ್ರಶ್ನೆಯಾಗಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸ್ವತಃ ಡಿಕೆ ಶಿವಕುಮಾರ್ ಅವರೇ ಇದರ ಹಿಂದಿನ ಸೂತ್ರಧಾರ ಎಂದಿದ್ದಾರೆ. ಕೆಎನ್ ರಾಜಣ್ಣ ಸತ್ಯ ಹೇಳಿದ್ದರು. ಇದಕ್ಕೇ ಹೈಕಮಾಂಡ್ ಗೆ ಸಹಿಸಲಾಗಿಲ್ಲ. ತಮಗೆ ಆದ ಅವಮಾನಕ್ಕೆ ಅವರನ್ನು ವಜಾ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬಣ್ಣಿಸಿದ್ದಾರೆ.

ಕೆಎನ್ ರಾಜಣ್ಣನವರು ಸಿಎಂ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಕಾಣಿಸಿಕೊಂಡವರು. ಈ ಹಿಂದೆ ಸಿಎಂ ಬದಲಾವಣೆ ವಿಚಾರ ಪ್ರಸ್ತಾಪ ಮಾಡಿದಾಗಲೂ ರಾಜಣ್ಣನ ಪರವಾಗಿ ಸಿದ್ದರಾಮಯ್ಯ ನಿಂತಿದ್ದರು.

ಆದರೆ ಈಗ ಮೊನ್ನೆಯಷ್ಟೇ ರಾಹುಲ್ ಗಾಂಧಿ ಮತಗಳ್ಳತನ ಹೋರಾಟದ ವಿರುದ್ಧವೇ ರಾಜಣ್ಣ ಕಿಡಿ ಕಾರಿದ್ದು ಅವರನ್ನು ಕಿತ್ತು ಹಾಕಲು ಒಳ್ಳೆಯ ಅಸ್ತ್ರ ಸಿಕ್ಕಂತಾಗಿತ್ತು. ಹೀಗಾಗಿ ಇದೇ ನೆಪವಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ನಲ್ಲಿ ಗೊಂದಲದ ಹೇಳಿಕೆ ನೀಡುತ್ತಿದ್ದ ರಾಜಣ್ಣನನ್ನು ಕಿತ್ತು ಹಾಕಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಮತಗಳ್ಳತನದ ವಿರುದ್ಧ ರಾಜಣ್ಣ ನೀಡಿದ್ದ ಹೇಳಿಕೆ ಹೈಕಮಾಂಡ್ ಗಮನಕ್ಕೆ ಬಂದಿತ್ತು. ಹೀಗಾಗಿ ನಿನ್ನೆ ಸಂಜೆಯೊಳಗೇ ಅವರ ರಾಜೀನಾಮೆ ಪಡೆಯಲು ಸೂಚಿಸಲಾಗಿತ್ತು. ಒಂದು ವೇಳೆ ರಾಜೀನಾಮೆ ಪಡೆಯದಿದ್ದರೆ ಪಕ್ಷದಿಂದ ಉಚ್ಛಾಟಿಸಲೂ ಖಡಕ್ ಸಂದೇಶ ರವಾನೆಯಾಗಿತ್ತು. ಹೀಗಾಗಿ ತಮ್ಮ ಆಪ್ತನಾಗಿದ್ದರೂ ಹೈಕಮಾಂಡ್ ಖಡಕ್ ಸೂಚನೆ ಬಂದಿದ್ದರಿಂದ ಸಿಎಂ ಕೈ ಕಟ್ಟಿ ಕೂರುವಂತಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments