Webdunia - Bharat's app for daily news and videos

Install App

ಕಾಂಗ್ರೆಸ್‌ ಶಾಸಕರು ಧರ್ಮೇಗೌಡರನ್ನು ಸ್ಪೀಕರ್ ಪೀಠದಿಂದ ಎಳೆದು, ನೂಕಿದ ವಿಡಿಯೋ ಹಂಚಿಕೊಂಡ ಬಿಜೆಪಿ

Sampriya
ಶನಿವಾರ, 22 ಮಾರ್ಚ್ 2025 (20:31 IST)
Photo Courtesy X
ಬೆಂಗಳೂರು: ಅಂದು ಕಾಂಗ್ರೆಸ್ ಶಾಸಕರು  ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರು ಕೂತಿದ್ದ ಪೀಠದ ಮೇಲೆ ಎರಗಿ, ಅವರನ್ನು ಪೀಠದಿಂದ ನೂಕಿ, ಸ್ಪೀಕರ್ ಪೀಠಕ್ಕೆ ಕಾಂಗ್ರೆಸ್ ಶಾಸಕರು ಅಗೌರವ ತೋರಿರುವ ವಿಡಿಯೋವನ್ನು ಬಿಜೆಪಿ ಶೇರ್ ಮಾಡಿ, ಪ್ರಶ್ನೆ ಮಾಡಿದೆ.

ಕಾಂಗ್ರೆಸ್ ಶಾಸಕರು ಗೂಂಡಾಗಳಂತೆ ವರ್ತಿಸಿ ಸ್ಪೀಕರ್‌ಗೆ ಅಪಮಾನ ಮಾಡಿ, ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದರು. ಆದರೆ ಇಂದು ಯಾವುದೇ ಬಿಜೆಪಿ ನಾಯಕರು ಎಳೆದಾಡಿ ತಳ್ಳಿಸುವಂತಹ ಯಾವುದೇ ಘಟನೆ ಮಾಡದಿದ್ದರೂ, ಸಣ್ಣ ಘಟನೆಯ ಕುರಿತು ಪರಿಶೀಲನೆ ಮಾಡದೆ, ಸರ್ವಾಧಿಕಾರಿಯಂತೆ ವಿರೋಧ ಪಕ್ಷಗಳನ್ನು ಹತ್ತಿಕ್ಕುವುದಕ್ಕಾಗಿ 6 ತಿಂಗಳು ಅಮಾನತು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

ಬಿಜೆಪಿ ಪೋಸ್ಟ್‌ ಹೀಗಿದೆ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರು ಕೂತಿದ್ದ ಪೀಠದ ಮೇಲೆ ಎರಗಿದ ಕಾಂಗ್ರೆಸ್ ಪುಂಡ ಶಾಸಕರು ಅವರನ್ನು ಕೆಳಗೆ ಎಳೆದು ಬಿಸಾಡಿದ್ದರು.

ಬುದ್ಧಿವಂತರ ಛಾವಡಿಯೆಂದೇ ಕರೆಯಲಾಗುವ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕರು ಅಕ್ಷರಶಃ ಗೂಂಡಾಗಳಂತೆ ವರ್ತಿಸಿ ಧರ್ಮೇಗೌಡರಿಗೆ ಅಪಮಾನ ಮಾಡಿ ಆತ್ಮಹತ್ಯೆ ‌ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದರು.

ಆ ಸಮಯದಲ್ಲಿ ಕಾಂಗ್ರೆಸ್ಸಿನ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ಸಭಾಪತಿಯಾಗಿದ್ದರು. ಉಪಸಭಾಪತಿ ಧರ್ಮೇಗೌಡ ಅವರ ಮೇಲೆ ನಡೆದ ದೌರ್ಜನ್ಯದ ಕುರಿತು ವರದಿ ನೀಡಲು ಒಂದು ಕಮಿಟಿಯನ್ನು ರಚನೆ ಮಾಡಿದ್ದರು. ಆದರೆ, ಇಂದು ಎಳೆದಾಡಿ ತಳ್ಳಿಸುವಂತಹ ಯಾವುದೇ ಘಟನೆ ನಡೆದಿಲ್ಲವಾದರೂ, ಸಣ್ಣ ಘಟನೆಯ ಕುರಿತು ಪರಿಶೀಲನೆ ಮಾಡದೆ, ಸರ್ವಾಧಿಕಾರಿಯಂತೆ ವಿರೋಧ ಪಕ್ಷಗಳನ್ನು ಹತ್ತಿಕ್ಕುವುದಕ್ಕಾಗಿ 6 ತಿಂಗಳು ಅಮಾನತು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡಿದೆ.

ಇಂದು ಬಿಜೆಪಿಯ 18 ಶಾಸಕರು ಅಂತಹ ಕಿಡಿಗೇಡಿ ಕೃತ್ಯವೇನು ಮಾಡಿಲ್ಲ. ಧರ್ಮ ಆಧಾರಿತ ಮೀಸಲಾತಿ‌ ನೀಡುವಂತಿಲ್ಲ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಸಂವಿಧಾನದಲ್ಲಿ ಹೇಳಿದ್ದಾರೆ. ಹೀಗಿದ್ದರೂ ಸಂವಿಧಾನ ವಿರೋಧಿ ಸಿದ್ದರಾಮಯ್ಯ ಸರ್ಕಾರ ತುಷ್ಟೀಕರಣಕ್ಕಾಗಿ ಮೀಸಲಾತಿ ನೀಡಿ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡಿದೆ.

ಮುಖ್ಯಮಂತ್ರಿ ಕುರ್ಚಿಯನ್ನು ವಾಮಮಾರ್ಗದ ಮೂಲಕವಾದರೂ ಪಡೆಯಲೇಬೇಕೆಂಬ ದುರುದ್ದೇಶದಿಂದ ಸುಮಾರು 48 ರಾಜಕಾರಣಿಗಳ ಮೇಲೆ ಅದು ಕಾಂಗ್ರೆಸ್ ಸಚಿವರು, ಶಾಸಕರ ಮೇಲೆಯೇ ಹನಿಟ್ರ್ಯಾಪ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments