Webdunia - Bharat's app for daily news and videos

Install App

ಬಿಜೆಪಿಯವರು ಕ್ಷಮೆ ಕೇಳಬೇಕು -ದಿನೇಶ್ ಗುಂಡೂರಾವ್

Webdunia
ಗುರುವಾರ, 6 ಅಕ್ಟೋಬರ್ 2022 (16:54 IST)
ಬಿಜೆಪಿಯವರಿಗೆ ಆತ್ಮಸಾಕ್ಷಿಯಿದ್ದರೆ ಬಹಿರಂಗ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಪರೇಶ್ ಮೇಸ್ತಾ ಸಾವನ್ನು ಧಾರ್ಮಿಕ ಹತ್ಯೆ ಎಂದು ಬಿಂಬಿಸಿದ್ದ ಬಿಜೆಪಿಯವರು ಇಡೀ ಕರಾವಳಿಯನ್ನೇ ಕೋಮುದಳ್ಳುರಿಗೆ ತಳ್ಳಿದ್ದರು.ಅಂದಿನ ನಮ್ಮ ಸರಕಾರ ಯಾವ ಹಿಂಜರಿಕೆಯೂ ಇಲ್ಲದೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
ಮೇಸ್ತಾ ಸಾವು ಸ್ವಾಭಾವಿಕ ಎಂದು ನ್ಯಾಯಾಲಯಕ್ಕೆ ವರದಿ ನೀಡಿದೆ. ಈಗ ಎಲ್ಲಿದ್ದಾರೆ ಬಿಜೆಪಿಯ ಕೂಗುಮಾರಿ ನಾಯಕರು?' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೇಶ್ ಮೇಸ್ತಾ ಸಾವು ಸ್ವಾಭಾವಿಕ ಎಂದು ಸಿಬಿಐ ತನಿಖೆಯಿಂದ ಗೊತ್ತಾಗಿದೆ. ಆದರೆ ಈ ಸಾವನ್ನು ರಾಜಕೀಯಗೊಳಿಸಿ ದೊಂಬಿ ಎಬ್ಬಿಸಿದ್ದ ಬಿಜೆಪಿಯವರು ನಿಜವಾದ ಸಮಾಜ ಘಾತಕರಲ್ಲವೆ? ಸುಳ್ಳು ಅಪಾದನೆ ಮಾಡಿದ ಶಾಂತಿ ಭಂಗ ಮಾಡಿದ್ದು ಅಪರಾಧವಲ್ಲವೆ? ಬಿಜೆಪಿಯವರಿಗೆ ಆತ್ಮಸಾಕ್ಷಿಯಿದ್ದರೆ ಬಹಿರಂಗ ಕ್ಷಮೆ ಕೇಳಲಿ" ಎಂದು ಅವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments