Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

Krishnaveni K
ಶುಕ್ರವಾರ, 29 ಆಗಸ್ಟ್ 2025 (15:32 IST)
ಬೆಂಗಳೂರು: ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ. ಆದರೆ ಗಣೇಶೋತ್ಸವ ಕಾರ್ಯಕ್ರಮದ ಮೈಕ್ ಹೊತ್ತೊಯ್ದಿದೆ ಎಂದು ಬಿಜೆಪಿ ಟೀಕೆ ಮಾಡಿದೆ.

ರಾಜ್ಯದ ಕೆಲವೆಡೆ ಗಣೇಶೋತ್ಸವ ಕಾರ್ಯಕ್ರಮಕ್ಕೆ ನಿಯಮದ ಹೆಸರಿನಲ್ಲಿ ಪೊಲೀಸರು ಅಡ್ಡಿಪಡಿಸಿರುವ ಘಟನೆ ಗಳು ನಡೆದಿವೆ. ಈ ಘಟನೆಗಳನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

‘ರಾಜ್ಯದಲ್ಲಿ ಅಧಿಕಾರದಲ್ಲಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ವಿಘ್ನ ವಿನಾಯಕನ ಕಾರ್ಯಕ್ರಮಕ್ಕೆ ಅಡ್ಡಿ ತಂದು ಧ್ವನಿ ವರ್ಧಕಗಳನ್ನು ಹೊತ್ತೊಯ್ದಿದೆ. ದಿನಕ್ಕೆ 5 ಬಾರಿ ಕೂಗುವ ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ಮುಟ್ಟುವ ತಾಕತ್ತು ಈ ಹಿಂದೂ ವಿರೋಧಿ ಸಿದ್ದರಾಮಯ್ಯನವರಿಗಿಲ್ಲ.

ಕಳೆದ ಬಾರಿ ಗಣೇಶನ ಮೂರ್ತಿಯನ್ನೇ ಬಂಧಿಸಿದ ಸರ್ಕಾರ, ಕೆರಗೋಡಿನಲ್ಲಿ ಭಗವಾಧ್ವಜ ಕಿತ್ತೆಸೆದಿದ್ದ ಸರ್ಕಾರ, ಮತ್ತೆ ಹಿಂದೂಗಳ ಮೇಲಿನ ಪ್ರಹಾರ ಮುಂದುವರೆಸಿದೆ’ ಎಂದು ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. ಕೆಲವೆಡೆ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದಾಗ ಮೈಕ್ ಕಿತ್ತುಕೊಂಡು ಹೋಗಿದ್ದರೆ ಮತ್ತೆ ಕೆಲವೆಡೆ ಮನರಂಜನಾ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವ ಬಗ್ಗೆ ವರದಿಗಳಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು: ಆರ್ ಅಶೋಕ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕ್ರಿಶ್ಚಿಯನ್ನರಲ್ಲೂ ಬ್ರಾಹ್ಮಣ, ರೆಡ್ಡಿ ಇಷ್ಟೊಂದು ಜಾತಿನಾ: ಬಿಜೆಪಿ ಟೀಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕ ರಕ್ತದೊತ್ತಡದ ಆರಂಭಿಕ ಲಕ್ಷಣಗಳೇನು

ಮುಂದಿನ ಸುದ್ದಿ
Show comments