Webdunia - Bharat's app for daily news and videos

Install App

ದೇವಾಲಯಗಳೇಕೆ ಕೊಡಬೇಕು 10% ಕಪ್ಪ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ

Krishnaveni K
ಗುರುವಾರ, 22 ಫೆಬ್ರವರಿ 2024 (09:10 IST)
Photo Courtesy: Twitter
ಬೆಂಗಳೂರು: ಹಿಂದೂ ದೇವಾಲಯಗಳಿಗೆ 10% ತೆರಿಗೆ ವಿಧಿಸುವ ಹೊಸ ಬಿಲ್ ಪಾಸ್ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತಿರುಗಿಬಿದ್ದಿದೆ. ಇದು ಹಿಂದೂ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದೆ.

ನಿನ್ನೆ ಅಧಿವೇಶನದಲ್ಲಿ ‘ಕರ್ನಾಟಕ ಹಿಂದೂ ಧರ್ಮ ಸಂಸ್ಥೆಗಳು ಮತ್ತು ದತ್ತಿ ಸಂಸ್ಥೆಗಳ ಮಸೂದೆ 2024’ ರನ್ನು ಪಾಸ್ ಮಾಡಲಾಯಿತು. ಅದರಂತೆ ದೇವಾಲಯಗಳ ಆದಾಯದಿಂದ ಶೇ.10 ರಷ್ಟು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಬೇಕು ಎಂಬ ನಿಯಮ ಜಾರಿಗೊಳಿಸಲಾಯಿತು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ಯತೀಂದ್ರ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಬಿಜೆಪಿ ನಾಯಕರು ಕಿಡಿ ಕಾರಿದರು.

ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿರುವ ಬಿವೈ ವಿಜಯೇಂದ್ರ ‘ಈ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಮತ್ತೊಮ್ಮೆ ಸಾಬೀತಾಗಿದೆ. ತನ್ನ ಬರಿದಾದ ಖಜಾನೆ ತುಂಬಿಸಲು ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳ ಆದಾಯಕ್ಕೆ ಕೈ ಹಾಕಿದೆ. ಹಿಂದೂ ದೇವಾಲಯಗಳ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತದೆ. ಭಕ್ತರು ದೇವಾಲಯದ ಅಭಿವೃದ್ಧಿಗೆ ಎಂದು ನೀಡುವ ಹಣವನ್ನು ದೇವಾಲಯಗಳ ಅಭಿವೃದ್ಧಿಗೆ ಬಳಸಬೇಕು. ಇದನ್ನು ಬೇರೆ ಉದ್ದೇಶಕ್ಕೆ ಬಳಸಿದರೆ ಭಕ್ತರ ಭಾವನೆಗೆ ಧಕ್ಕೆ ತಂದಂತೆ. ಇದರಿಂದ ಹಿಂಸೆ ಮತ್ತು ವಂಚನೆ ಹೆಚ್ಚಾಗುತ್ತದೆ’ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಾ ಸದನದಲ್ಲಿ ಆಡಳಿತಾರೂಢ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರಕ್ಕೆ ಕೇವಲ ಹಿಂದೂ ದೇವಾಲಯಗಳ ಆದಾಯ ಮಾತ್ರ ಯಾಕೆ ಕಾಣುತ್ತಿದೆ? ಕ್ರಿಶ್ಚಿಯನ್ ಮತ್ತು ಮುಸ್ಲಿಂ ಧಾರ್ಮಿಕ ಕೇಂದ್ರಗಳನ್ನು ಮತ್ತು ಅವರ ಆದಾಯಗಳನ್ನು ಅವರ ಪಾಡಿಗೆ ಬಿಟ್ಟಿರುವಾಗ ಹಿಂದೂ ದೇವಾಲಯ ಮತ್ತು ಆದಾಯವನ್ನು ಮಾತ್ರ ಸರ್ಕಾರ ನಿಯಂತ್ರಿಸುವುದು ಯಾಕೆ? ಹಿಂದೂ ದೇವಾಲಯಗಳನ್ನೂ ಅದರ ಪಾಡಿಗೆ ಬಿಟ್ಟು ಬಿಡಿ. ದೇವಾಲಯಗಳ ಹಣ ದೇವಾಲಯಗಳ ಅಭಿವೃದ್ಧಿಗೆ ಬಳಕೆಯಾಗಲಿ. ಆಗಲೇ ನಿಜವಾದ ಜಾತ್ಯಾತೀತೆ ಉಳಿಯುವುದು. ನಮ್ಮ ಹಿಂದೂ ದೇವಾಲಯಗಳ ಹಣ ತೆಗೆದುಕೊಂಡು ಹೋಗಿ ಬೇರೆ ಸಮುದಾಯದ ಅಭಿವೃದ್ಧಿಗೆ ನೀಡುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ, ಈ ವಿಚಾರದಲ್ಲಿ ಬಿಜೆಪಿ ವೃಥಾ ರಾಜಕೀಯ ಮಾಡುತ್ತಿದೆ. ರಾಜಕೀಯಕ್ಕೆ ಧರ್ಮ ಬೆರೆಸಬಾರದು. ನಿಜವಾದ ಹಿಂದುತ್ವವನ್ನು ಬೆಳೆಸುತ್ತಿರುವುದು ಕಾಂಗ್ರೆಸ್ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments