Publish Date: Tue, 20 Aug 2019 (18:54 IST)
Updated Date: Tue, 20 Aug 2019 (18:56 IST)
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದ ಮಂತ್ರಿಮಂಡಲ ರಚನೆಯಲ್ಲಿ ತಮ್ಮನ್ನ ಕೈ ಬಿಟ್ಟಿದ್ದಕ್ಕೆ ಕಮಲ ಪಡೆ ಶಾಸಕರು ಗರಂ ಆಗಿದ್ದಾರೆ. ಇತ್ತ ಶಾಸಕರ ಬೆಂಬಲಿಗರು ಅಲ್ಲಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ತಿಪ್ಪಾರೆಡ್ಡಿ ಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಪಲ್ಸರ್ ಬೈಕ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಹಿರಿಯ ಶಾಸಕರಾಗಿರೋ ತಿಪ್ಪಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಮಲ ಪಡೆ ಕಾರ್ಯಕರ್ತರು ಆಗ್ರಹ ಮಾಡಿದ್ದಾರೆ.
ಇನ್ನು ಹಲವೆಡೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗಳು ಮುಂದುವರಿದಿವೆ. ತಮ್ಮನ್ನು ಸಂಪುಟದಿಂದ ಕೈ ಬಿಟ್ಟಿದ್ದಕ್ಕೆ ಅಸಮಧಾನವನ್ನು ಹಲವಾರು ಶಾಸಕರು ಹೊರಹಾಕುತ್ತಿದ್ದು, ಇದು ಬಿ.ಎಸ್.ವೈಗೆ ಬಿಸಿ ತುಪ್ಪವಾಗಿ ಪರಿಣಮಿಸಲಿದೆ ಎಂಬ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.