Webdunia - Bharat's app for daily news and videos

Install App

ಮೈಸೂರಿನಲ್ಲಿ ಜುಲೈ 25 ರಂದು ಬಿ.ಜೆ.ಪಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ

Webdunia
ಶುಕ್ರವಾರ, 23 ಜುಲೈ 2021 (19:19 IST)
ಬೆಂಗಳೂರು: ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸಭೆಯು ಜುಲೈ 25ರಂದು ಭಾನುವಾರ ಮೈಸೂರಿನ “ಗೋವಿಂದರಾವ್ ಮೆಮೊರಿಯಲ್ ಹಾಲ್”ನಲ್ಲಿ ನಡೆಯಲಿದ್ದು, ಆ ದಿನ ಬೆಳಿಗ್ಗೆ 10.30ಕ್ಕೆ ರಾಜ್ಯದ  ಸಹಕಾರ ಸಚಿವರಾದ  ಎಸ್.ಟಿ. ಸೋಮಶೇಖರ್ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ ಎಂದು ಭಾರತೀಯ ಜನತಾ  ಪಕ್ಷ ತನ್ನ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಪ್ರಕಟಣೆಯಲ್ಲಿ ಮೂಲಕ ತಿಳಿಸಿದ್ದಾರೆ.
 
ರಾಜ್ಯಸಭಾ ಸದಸ್ಯರು ಮತ್ತು ರೈತ ಮೋರ್ಚಾ ರಾಜ್ಯ ಅಧ್ಯಕ್ಷರಾದ ಈರಣ್ಣ ಕಡಾಡಿ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪಸಿಂಹ ಮತ್ತಿತರ ಬಿಜೆಪಿ ಮುಖಂಡರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನುವ ಮಾಹಿತಿ ಪಕ್ಷದ ವತಿಯಿಂದ ದೊರೆತಿದೆ.
 
ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ “ಪಕ್ಷ ಸಂಘಟನೆಯಲ್ಲಿ ರೈತ ಮೋರ್ಚಾದ ಪಾತ್ರ”,  “ದೇಶದ ಆರ್ಥಿಕತೆಯಲ್ಲಿ ಕೃಷಿಯ ಪಾತ್ರ”, “ಮುಂದಿನ ಕಾರ್ಯ ಯೋಜನೆ” ಹಾಗೂ “ಕೃಷಿ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಅಭಿನಂದನೆಗಳು” ಎನ್ನುವ  ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ರೈತ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments